ಮಾತೋಶ್ರೀ ರಮಾಬಾಯಿ ಇಲ್ಲದಿದ್ದರೆ ಅಂಬೇಡ್ಕರ್ ಅವರು ಬದುಕಿನಲ್ಲಿ ಬೆಳಕು ಕಾಣುವುದಕ್ಕೆ ಸಾಧ್ಯವಿರಲಿಲ್ಲ: ಡಾ.ಜ್ಞಾನಪ್ರಕಾಶ್ ಸ್ವಾಮಿ.!

ಬೀದರ.08.ಫೆ.25:- ರಮಾಬಾಯಿ ಇಲ್ಲದೇ ಇದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಯಾವತ್ತೂ ಕೂಡ ತನ್ನ ಬದುಕಿನಲ್ಲಿ ಬೆಳಕು ಕಾಣುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ.

ರಮಾಬಾಯಿ ಅವರ ತ್ಯಾಗದಿಂದಲೇ ಅಂಬೇಡ್ಕರ್ ಅವರಿಗೆ ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಯಿತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಡಾ.ಜ್ಞಾನಪ್ರಕಾಶ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಸಾಯಂಕಾಲ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ವತಿಯಿಂದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.

ಹುಟ್ಟಿದ ನಾಲ್ಕು ಮಕ್ಕಳ ಸಾವು, ನೋವು ತಾವೆ ಅನುಭವಿಸಿ ಈ ನೆಲಕ್ಕೆ ಅಂಟಿದ ಅಸಮಾನತೆ ನಿರ್ಮೂಲನೆ ಮಾಡಲು, ಸಮೃದ್ಧ ಸಮಾಜ ನಿರ್ಮಾಣಕ ಮಾಡುವುದಕ್ಕೆ ಶಕ್ತಿಯಾದರು. ಮಹಿಳೆಯರ ಸ್ವಾಭಿಮಾನದ ಶಕ್ತಿ, ಪುರುಷರ ಆದರ್ಶ ತಾಯಿಯೇ ರಮಾಬಾಯಿ ಅಂಬೇಡ್ಕರ್ ಆಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೀರಶೇಟ್ಟಿ ದೀನೆ ಬರೆದಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಯುವ ಆ ದಿನಗಳು ಎಂಬ ಕೃತಿ ಬಿಡುಗಡೆ ಮಾಡಲಾಯಿತು. 86 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭೀಕ್ಕುಣಿ ಅರ್ದಸ್ಮಿತಾ, ಕವಿತಾ ಹುಗ್ಗಿ ಪಾಟೀಲ್, ಗೋವಿಂದ್ ಪೂಜಾರಿ, ಲಕ್ಷ್ಮಿ ಬಸಪ್ಪ, ಮಹಾದೇವಿ ದಾಂಡೇಕರ್, ಅಂಬಾದಾಸ್ ಗಾಯಕವಾಡ್, ಸುಬ್ಬಣ್ಣ ಕರಕನಳ್ಳಿ ಹಾಗೂ ಸಂಘಪ್ರಿಯಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇಂದು ಬೀದರ್ ನಗರದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

1 hour ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

1 hour ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

9 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

11 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

11 hours ago