ಮಾತೋಶ್ರೀ ರಮಾಬಾಯಿ ಇಲ್ಲದಿದ್ದರೆ ಅಂಬೇಡ್ಕರ್ ಅವರು ಬದುಕಿನಲ್ಲಿ ಬೆಳಕು ಕಾಣುವುದಕ್ಕೆ ಸಾಧ್ಯವಿರಲಿಲ್ಲ: ಡಾ.ಜ್ಞಾನಪ್ರಕಾಶ್ ಸ್ವಾಮಿ.!

ಬೀದರ.08.ಫೆ.25:- ರಮಾಬಾಯಿ ಇಲ್ಲದೇ ಇದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಯಾವತ್ತೂ ಕೂಡ ತನ್ನ ಬದುಕಿನಲ್ಲಿ ಬೆಳಕು ಕಾಣುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ.

ರಮಾಬಾಯಿ ಅವರ ತ್ಯಾಗದಿಂದಲೇ ಅಂಬೇಡ್ಕರ್ ಅವರಿಗೆ ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಯಿತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಡಾ.ಜ್ಞಾನಪ್ರಕಾಶ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಸಾಯಂಕಾಲ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ವತಿಯಿಂದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.

ಹುಟ್ಟಿದ ನಾಲ್ಕು ಮಕ್ಕಳ ಸಾವು, ನೋವು ತಾವೆ ಅನುಭವಿಸಿ ಈ ನೆಲಕ್ಕೆ ಅಂಟಿದ ಅಸಮಾನತೆ ನಿರ್ಮೂಲನೆ ಮಾಡಲು, ಸಮೃದ್ಧ ಸಮಾಜ ನಿರ್ಮಾಣಕ ಮಾಡುವುದಕ್ಕೆ ಶಕ್ತಿಯಾದರು. ಮಹಿಳೆಯರ ಸ್ವಾಭಿಮಾನದ ಶಕ್ತಿ, ಪುರುಷರ ಆದರ್ಶ ತಾಯಿಯೇ ರಮಾಬಾಯಿ ಅಂಬೇಡ್ಕರ್ ಆಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೀರಶೇಟ್ಟಿ ದೀನೆ ಬರೆದಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಯುವ ಆ ದಿನಗಳು ಎಂಬ ಕೃತಿ ಬಿಡುಗಡೆ ಮಾಡಲಾಯಿತು. 86 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭೀಕ್ಕುಣಿ ಅರ್ದಸ್ಮಿತಾ, ಕವಿತಾ ಹುಗ್ಗಿ ಪಾಟೀಲ್, ಗೋವಿಂದ್ ಪೂಜಾರಿ, ಲಕ್ಷ್ಮಿ ಬಸಪ್ಪ, ಮಹಾದೇವಿ ದಾಂಡೇಕರ್, ಅಂಬಾದಾಸ್ ಗಾಯಕವಾಡ್, ಸುಬ್ಬಣ್ಣ ಕರಕನಳ್ಳಿ ಹಾಗೂ ಸಂಘಪ್ರಿಯಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇಂದು ಬೀದರ್ ನಗರದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

3 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

4 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

4 hours ago