ಮಾದಕ ವಸ್ತು ಮಾರಾಟಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ-ಎಸ್‌ಪಿ ಪ್ರದೀಪ್ ಗುಂಟಿ

ಬೀದರ.27.ಜೂನ್.25:- ಮಾದಕ ವ್ಯಾಸನಿಗಳ ಹಾಗೂ ಮಾದಕ ವಸ್ತುಗಳ ಮಾರಾಟ ಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ, ಅಂಥವರನ್ನು ಜೈಲಿಗೆ ಕಳಿಸುವ ಕೆಲಸವನ್ನು ನಾವು ಮಾಡುತ್ತೇವೆಂದು ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು.


ಅವರು ಗುರುವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಪೊಲೀಸ್ ಇಲಾಖೆಯಿಂದ ಆಯೋಜಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ಸಮಾಜವನ್ನು ನಶೆ ಮುಕ್ತ ಮಾಡಲು ಸಾದ್ಯವಾಗುತ್ತದೆ ಆದ್ದರಿಂದ ಎಲ್ಲರೂ ಪೊಲೀಸ್ ಇಲಾಖೆ ಸಹಕರಿಸಬೇಕು ಎಂದರು
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಾಗೃತಿ ಜಾಥಾ ಕಾರ್ಯಕ್ರಮವು ಬೀದರ್ ನಗರದ ವಿಶ್ವಗುರು ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ, ಭಗತ್ ಸಿಂಗ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಬ್ರಿಮ್ಸ್ ಆಸ್ಪತ್ರೆ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ ತಲುಪಿತು. ಈ ಸಮಯದಲ್ಲಿ ಡ್ರಗ್ಸ್ ಮಾರಾಟ, ಮಾದಕ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರುವ ಬಗ್ಗೆ ಸಂದೇಶ ನೀಡುವ ಬಿತ್ತಿ ಪತ್ರಗಳನ್ನು ಹಿಡಿದು ಬೀದರ್ ಜಿಲ್ಲಾ ಪೊಲೀಸರೊಂದಿಗೆ ನೂರಾರು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.


ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಹೆಚ್ಚುವರಿ ಎಸ್ಪಿ ಚಂದ್ರಕಾoತ್ ಪೂಜಾರಿ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಬೀದರ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಎ., ಡಿವೈಎಸ್ಪಿ ಶಿವನಗೌಡ ಪಾಟೀಲ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

ಬೀದರ | ಪೋಟೋ ಶಿರ್ಷಿಕೆ

ಬೀದರ.28.ಜೂನ್.25:- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ…

4 minutes ago

ಬೀದಿ ಬದಿ ವ್ಯಾಪಾರಿಗಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಬೀದರ.28.ಜೂನ್.25:- ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು, ಜುಸ್ ಸೆಂಟರ್, ಚಿಕನ್ ಮತ್ತು ಕಬಾಬ್ ಸೆಂಟರ್, ಟಿ ಅಂಗಡಿಗಳು, ಜಿಲೇಬಿ ತಯಾರಕರು,…

11 minutes ago

ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

ಬೀದರ.28.ಜೂನ್.25:- ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಇತ್ತೀಚೆಗೆ…

14 minutes ago

ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ.28.ಜೂನ್.25:- ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾoಶದಲ್ಲಿ ಖಾತಾ ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ…

19 minutes ago

ಭಾಗ್ಯನಗರ ಪ.ಪಂ.: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ.28.ಜೂನ.25:- ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾಶದಲ್ಲಿ ಇ-ಖಾತಾ/ನಮೂನೆ-03 ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು,…

26 minutes ago

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ<br>

ಕೊಪ್ಪಳ.28.ಜೂನ್.25:-2025-26ನೇ ಸಾಲಿನ ಜಿಲ್ಲಾ ವಲಯದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ (ಪ.ಜಾತಿ…

29 minutes ago