ಮಾದಕ ವಸ್ತು ಮಾರಾಟಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ-ಎಸ್‌ಪಿ ಪ್ರದೀಪ್ ಗುಂಟಿ

ಬೀದರ.26.ಜೂನ್.25:- ಮಾದಕ ವ್ಯಾಸನಿಗಳ ಹಾಗೂ ಮಾದಕ ವಸ್ತುಗಳ ಮಾರಾಟ ಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ, ಅಂಥವರನ್ನು ಜೈಲಿಗೆ ಕಳಿಸುವ ಕೆಲಸವನ್ನು ನಾವು ಮಾಡುತ್ತೇವೆಂದು ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು.

ಅವರು ಗುರುವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಪೊಲೀಸ್ ಇಲಾಖೆಯಿಂದ ಆಯೋಜಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ಸಮಾಜವನ್ನು ನಶೆ ಮುಕ್ತ ಮಾಡಲು ಸಾದ್ಯವಾಗುತ್ತದೆ ಆದ್ದರಿಂದ ಎಲ್ಲರೂ ಪೊಲೀಸ್ ಇಲಾಖೆ ಸಹಕರಿಸಬೇಕು ಎಂದರು
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಾಗೃತಿ ಜಾಥಾ ಕಾರ್ಯಕ್ರಮವು ಬೀದರ್ ನಗರದ ವಿಶ್ವಗುರು ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ, ಭಗತ್ ಸಿಂಗ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಬ್ರಿಮ್ಸ್ ಆಸ್ಪತ್ರೆ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ ತಲುಪಿತು. ಈ ಸಮಯದಲ್ಲಿ ಡ್ರಗ್ಸ್ ಮಾರಾಟ, ಮಾದಕ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರುವ ಬಗ್ಗೆ ಸಂದೇಶ ನೀಡುವ ಬಿತ್ತಿ ಪತ್ರಗಳನ್ನು ಹಿಡಿದು ಬೀದರ್ ಜಿಲ್ಲಾ ಪೊಲೀಸರೊಂದಿಗೆ ನೂರಾರು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಹೆಚ್ಚುವರಿ ಎಸ್ಪಿ ಚಂದ್ರಕಾoತ್ ಪೂಜಾರಿ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಬೀದರ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಎ., ಡಿವೈಎಸ್ಪಿ ಶಿವನಗೌಡ ಪಾಟೀಲ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

ರಾಜ್ಯದಲ್ಲಿ ‘ಮನೆ ಮನೆಗೆ ಪೊಲೀಸ್’ ಯೋಜನೆ ಜಾರಿ.ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು.27.ಜೂನ್.25:- ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದರು.…

10 minutes ago

ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು ಶಾಂತಿಗಾಗಿ ಭರವಸೆಯನ್ನು ತರುತ್ತದೆ.

ಶ್ವೇತಭವನ: ಆಪರೇಷನ್ 'ಮಿಡ್‌ನೈಟ್ ಹ್ಯಾಮರ್' ಇರಾನ್ ಪರಮಾಣು ಬೆದರಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ, ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು…

6 hours ago

ರಾಷ್ಟ್ರೀಯ ಅಕ್ವಾಟಿಕ್ಸ್: 400 ಮೀಟರ್ ಐಎಂನಲ್ಲಿ ಶಾನ್ ಗಂಗೂಲಿ ಕೂಟ ದಾಖಲೆ; ಪದಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ

ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ 78ನೇ ಸೀನಿಯರ್ ರಾಷ್ಟ್ರೀಯ ಅಕ್ವಾಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಶಾನ್ ಗಂಗೂಲಿ 400 ಮೀಟರ್…

6 hours ago

ತುರ್ತು ಪರಿಸ್ಥಿತಿ ದೇಶದ ನೈತಿಕತೆಯನ್ನು ಕುಗ್ಗಿಸಿತು, ಸ್ವಾತಂತ್ರ್ಯದ ಮೌಲ್ಯವನ್ನು ಕಲಿಸಿತು: ವಿದೇಶಾಂಗ ಸಚಿವ ಜೈಶಂಕರ್

ಹೊಸ ದೆಹಲಿ.27.ಜೂನ್.25:- 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯು ದೇಶ ಮತ್ತು ಸಮಾಜದ ನೈತಿಕತೆಯನ್ನು ಮುರಿಯುವ ಗುರಿಯನ್ನು ಹೊಂದಿತ್ತು ಎಂದು…

6 hours ago

ಪುರಿಯಲ್ಲಿ ಭಗವಾನ್ ಜಗನ್ನಾಥ ಮತ್ತು ಅವರ ಇಬ್ಬರು ಸಹೋದರರ ವಿಶ್ವಪ್ರಸಿದ್ಧ ರಥಯಾತ್ರೆ ಇಂದು ಪ್ರಾರಂಭವಾಗಿದೆ.

ಪುರಿಯಲ್ಲಿ.27.ಜೂನ್.25:- ನಡೆಯುವ ರಥೋತ್ಸವ ಎಂದೂ ಕರೆಯಲ್ಪಡುವ ಅತ್ಯಂತ ನಿರೀಕ್ಷಿತ, ಅತಿದೊಡ್ಡ ವಾರ್ಷಿಕ ರಥಯಾತ್ರೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದು ದೇಶ ಮತ್ತು…

6 hours ago

ಬೋಧಕೇತರ ಸಾರ್ವತ್ರಿಕ ವರ್ಗಾವಣೆ ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.27.ಜೂನ್.25:- ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಸರ್ಕಾರದ…

9 hours ago