ಬೆಂಗಳೂರು.04.ಜುಲೈ.25:- ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಪಟ್ಟಣ, ರಾಮನಗರ ಜಿಲ್ಲೆ ಇಲ್ಲಿ ಅರ್ಧಶಾಸ್ತ್ರ ವಿಷಯದಲ್ಲಿ ಕರ್ತವ್ಯ ನಿರ್ವಹಿಸಿದ್ದು ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಒಂದು ವೇಳೆ ನಾನು ಕರ್ತವ್ಯ ನಿರ್ವಹಿಸುತ್ತಿದ್ದ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿಲ್ಲದಿದ್ದಲ್ಲಿ ಸವಾ (Seniority) (Date of entry into Service) ಪರಿಗಣಿಸಿ ನನ್ನ ವಾಸಸ್ಥಳಕ್ಕೆ ಹತ್ತಿರವಿರುವ ಹಾಗೂ ಕಾರ್ಯಭಾರ ಲಭ್ಯವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕರ್ತವ್ಯದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡಬೇಕೆಂದು ಉಲ್ಲೇಖ 1ರ ತಮ್ಮ ವತ್ರದಲ್ಲಿ ಕೋರಿರುತ್ತೀರಿ. ಪರಿಶೀಲಿಸಲಾಗಿ, ದಿನಾಂಕ:10.08.2024 ರಂದು ಖಾಯಂ ಪ್ರಾಧ್ಯಾಪಕರು ಕಾಲೇಜಿನ ಕರ್ತವ್ಯಕ, ವರದಿ -30 23 0 0 2024-25 ಕಾರ್ಯಭಾರವಿಲ್ಲದ ಕಾರಣ ತಮ್ಮನ್ನು ಕಾಲೇಜಿನ ಕರ್ತವ್ಯಕ್ಕೆ ವರದಿಮಾಡಿಸಿಕೊಂಡಿರುವುದಿಲ್ಲ ಎಂಬುದಾಗಿ ಉಲ್ಲೇಖ-2 ರಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.
ಮಾನ್ಯ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ:2610/20256 ನ್ಯಾಯಾಲಯವು ದಿನಾಂಕ:05.09.2024 ರಂದು ನೀಡಿರುವ ತೀರ್ಪಿನಲ್ಲಿ ಯು.ಜಿ.ಸಿ. ವಿದ್ಯಾರ್ಹತೆಯನ್ನು, ಹೊಂದಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವಂತೆ ನಿರ್ದೇಶಿಸಲಾಗಿರುತ್ತದೆ. ಅಲ್ಲದೆ, ದಿನಾಂಕ:14.012022 ರ ಸರ್ಕಾರದ ಆದೇಶದಲ್ಲಿ ಯು.ಜಿ.ಸಿ. ನಿಗಧಿವಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗಧಿತ ವಿದ್ಯಾರ್ಹತೆಯನ್ನು ಹೊಂದಲು 3 ವರ್ಷಗಳ ಕಾಲಾವಧಿ ನೀಡುವುದು.
3 ವರ್ಷದ ನಂತರ ಯು.ಜಿ.ಸಿ. ನಿಗಧಿವಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಎಂಬುದಾಗಿ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರಸ್ತುತ 2024-25 ನೇ ಸಾಲಿಗೆ ಯು.ಜಿ.ಸಿ. ವಿದ್ಯಾರ್ಹತೆಯನ್ನು ಹೊಂದಿರುವ ಅತಿಥಿ ಉಪನ್ಯಾಸಕರನ್ನು ಆನ್-ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು ತಾವು ಯು.ಜಿ.ಸಿ. ವಿದ್ಯಾರ್ಹತೆಯನ್ನು ಹೊಂದದೆ ಇರುವುದರಿಂದ ಕಾರ್ಯಭಾರ ಲಭ್ಯವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕರ್ತವ್ಯದಲ್ಲಿ ಮುಂದುವರಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂಬ ಮಾಹಿತಿಯನ್ನು ಈ ಮೂಲಕ ತಿಳಿಸಲಾಗಿದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…