ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ

ಬೆಂಗಳೂರು.05.ಮಾರ್ಚ್.25:-ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ, ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸುವಂತೆ ಪಂಚಾಯತ್ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದೇನೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ.

ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವುದು ನನ್ನ ಉದ್ದೇಶ.

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡುತ್ತೇನೆ.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

9 minutes ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

16 minutes ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

6 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

8 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

10 hours ago