ಮಾಸಿಕ ಗೌರವ ಧನ: ಅರ್ಜಿ ಆಹ್ವಾನ


ಕೊಪ್ಪಳ.18.ಜೂನ್.25:-ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ.


ಫಲಾನುಭವಿಗಳು ಕೊಪ್ಪಳ ಜಿಲ್ಲೆಯ ಬಸದಿಗಳು, ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯನ್ವಯ  ಅಥವಾ ಇತರೆ ಸಂಬoಧಪಟ್ಟ  ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ  ರೂ.5000/- ಮಾಸಿಕ ಗೌರವ ಧನ ನೀಡಲಾಗುವುದು.


ಸಂಬAಧಪಟ್ಟ ಆರ್ಚಕರುಗಳು ಅರ್ಜಿಯೊಂದಿಗೆ ಅರ್ಚಕರು/ಗ್ರಂಥಿಗಳ ಭಾವಚಿತ್ರ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ ಪ್ರತಿ, ಅರ್ಚಕರು/ಗ್ರಂಥಿಗಳು ಅವರ ಹುದ್ದೆಗೆ ಸಂಬoಧಪಟ್ಟ ಧಾರ್ಮಿಕ ವಿದ್ಯಾರ್ಹತೆಯ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ  ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರರಿಂದ ಪಡೆದ  ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ, ಸಂಸ್ಥೆಯವರು ಅರ್ಚಕರುಗಳ  ಮಾಹೆವಾರು ಕರ್ತವ್ಯದ ಹಾಜರಾತಿ ಬಗ್ಗೆ ನೀಡಿದ ಸೇವಾ ಪ್ರಮಾಣ ಪತ್ರ ಧೃಡೀಕರಣ ಪತ್ರವನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು.  ಅರ್ಜಿ ನಮೂನೆ  ಮತ್ತು ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.

ಬೆಂಗಳೂರು.19.ಜೂನ್.25:- ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು…

21 minutes ago

ಕಾಲೇಜು ಶಿಕ್ಷಣ ಇಲಾಖೆ ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

ಬೆಂಗಳೂರು.19.ಜೂನ್.25:- ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21,…

4 hours ago

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಆದೇಶ.!

ಬೆಂಗಳೂರು.19.ಜೂನ್.25:- ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ  ಪ್ರಥಮ ದರ್ಜೆ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ…

5 hours ago

ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ (OPS) ಯೋಜನೆ ಜಾರಿ ರಾಜ್ಯ ಸರ್ಕಾರದಿಂದ ಆದೇಶ.!

ಬೆಂಗಳೂರು.19.ಜೂನ್.25:- ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ…

6 hours ago

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ.

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ವಿವಿಧ SSLC.PUC ಹಾಗೂ ವಿವಿಧ ಪದವಿಗಳು ಹಾಗೂ ಅನೇಕ ಪ್ರಕಾರದ್…

11 hours ago

ಸರ್ಕಾರಿ ಶಾಲೆ`ಬಿಸಿಯೂಟ ಅಡುಗೆಯವರು, ಸಹಾಯಕಿಯರಿಗೆ ಗೌರವಧನ’ 1 ಸಾವಿರ ರೂ. ಹೆಚ್ಚಳ ಸರ್ಕಾರ ಆದೇಶ.!

ಬೆಂಗಳೂರು.19.ಜೂನ್.25:-2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು…

11 hours ago