ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ.!

ಬೆಂಗಳೂರು: ಕರ್ನಾಟಕದ ಬಸ್ ಮೇಲೆ ನಿರಂತರ ಶೋಷಣೆಯಾಗಿತ್ತಿರುವುದರಿಂದ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರಿಗೆ, ಸಾರಿಗೆ ಬಸ್, ಹಾಗೂ ಬಸ್ ನ ಚಾಲಕ, ನಿರ್ವಾಹಕರಿಗೆ ನಿರಂತರ ಹಲ್ಲೆ ಮಾಡುತ್ತಿರುವುದರಿಂದ ಇದನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಕನ್ನಡಪರ ಸಂಘಟನೆಗಳು ಇಂದು ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರಿದ್ದು, ‘ಅಖಂಡ ಕರ್ನಾಟಕ ಬಂದ್‌’ಗೆ ನಿರ್ಧರಿಸಿವೆ. ‘ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ’ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಎಲ್ಲ ಕನ್ನಡಪರ ನಾಯಕರು, ಕಾರ್ಯಕರ್ತರು ಅಖಂಡ ಕರ್ನಾಟಕ ಬಂದ್‌ಗೆ ಮಾಡಲು ಮುಂದಾಗಿದ್ದಾರೆ.

ಸರ್ವ ನಾಯಕರ ಅಭಿಪ್ರಾಯ, ಸಲಹೆ ಸೂಚನೆ ಪಡೆದು ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ಇಂದಿನ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆಯುತ್ತಿದ್ದಾರೆ. ಮರಾಠಿಗರ ಅಟ್ಟಹಾಸ ವಿರೋಧಿ ಹಾಗೂ ಕನ್ನಡಿಗರ ಪರವಾಗಿ, ಕರ್ನಾಟಕದ ಪರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲು ಬೆಂಗಳೂರಿನಲ್ಲಿ ಶುಕ್ರವಾರ (ಫೆಬ್ರವರಿ 28) ಸಭೆ ನಡೆಯಿತು. ಒಕ್ಕೋಟದ ಅಧ್ಯಕ್ಷ ಮತ್ತು ಕನ್ನಡ ಪರ ಮುಂಚೂಣಿ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸೇರಿದಂತೆ ವಿವಿಧ ಕನ್ನಡಪರ ನಾಯಕರು ಸಭೆಯಲ್ಲಿ ಚರ್ಚಿಸಿ ಅಖಂಡ ಕರ್ನಾಟಕ ಬಂದ್‌ಗೆ ನಿಧರಿಸಿದ್ದಾರೆ. ಅಧಿಕೃತ ಘೋಷಣೆ ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಗಾಗ ಕಾಲುಕೆರೆದು ಜಗಳಕ್ಕೆ ಬರುತ್ತಿರುವ, ಆಗಾಗ್ಗೆ ಕನ್ನಡಿಗರ ಮೇಲೆ ದೌರ್ಜನ್ಯ ಮಾಡುತ್ತಿರುವವರನ್ನು ಹತ್ತಿಕ್ಕಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರಲು ಕನ್ನಡಪರ ಸಂಘಟನೆಗಳು ಬಂದ್‌ಗೆ ಮುಂದಾಗಿದೆ ಎಂದು ತಿಳಿದು ಬಂದಿವೆ.

ಎಲ್ಲರನ್ನು ವಿಶ್ವಾಸಕ್ಕೆ ತೆರಗೆದುಕೊಂಡು ಬಂದ್‌ ಕರೆ

ವಾಟಾಳ್ ನಾಗರಾಜ್ ಅವರು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕರ್ನಾಟಕ ಬಂದ್‌ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈಗಾಗಲೇ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಬಣದವರೊಂದಿಗೆ ಮಾತನಾಡಿದ್ದೇವೆ. ಎಲ್ಲ ಕನ್ನಡಪರ ನಾಯಕರನ್ನು ಅಭಿಪ್ರಾಯ ಪಡೆದು ಬಂದ್ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

ಕರ್ನಾಟಕ ಬಂದ್ ವಿಚಾರದಲ್ಲಿ ಈ ಹಿಂದೆ ಕೆಲವು ಸಂಘಟನೆಯವರು ಬೆಂಬಲಿಸಿದ್ದರು, ಮತ್ತೆ ಕೆಲವರು ಬೆಂಬಲಿಸಿರಲಿಲ್ಲ. ಹೀಗಾಗಿ ಈ ಬಾರಿ ಅಂತಹ ಪ್ರಸಂಗ ಆಗಲ್ಲ. ಎಲ್ಲರನ್ನು ವಿಶ್ವಾಸ ತೆಗೆದುಕೊಂಡು, ಸಲಹೆ ತೆಗೆದುಕೊಂಡು ಬಂದ್ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

50 minutes ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

2 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago