ಅಹಮದಾಬಾದ್: 28.ಜನವರಿ.25:- ಇವತ್ ದೇಶದಲ್ಲಿ ಕೆಲವ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕಾರಣದಿಂದ ಈಗಲೂ ನಾವು ಮೀಸಲಾತಿಯನ್ನು ರದ್ದು ಪಡಿಸಲು ಸಾಧ್ಯವಾಗಿಲ್ಲ. ಮೀಸಲಾತಿ ಎಂಬುದು ತಲೆನೋವಾಗಿದೆ’ ಎಂದು ಗುಜರಾತ್ನ ಬಿಜೆಪಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನೌಕಾಬೆನ್ ಪ್ರಜಾಪತಿ ಹೇಳಿಕೆ ನೀಡಿದ್ದಾರೆ.
ಗುಜರಾತ್ ಅಹಮದಾಬಾದ್ನಲ್ಲಿ ಭಾನುವಾರ 26. ಜನವರಿ ಗಣರಾಜ್ಯೋತ್ಸವದ ಅಂಗವಾಗಿ ಬನಾಸ್ಕಾಂತಾ ಜಿಲ್ಲೆಯ ಬಾಬರ್ ಪಾಲಿಕೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಈ ರೀತಿ ಹೇಳಿದ್ದಾರೆ.
ಇವತ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆ ಹರಿದಾಡಿದ್ದು, ತೀವ್ರ ಟೀಕೆ ವ್ಯಕ್ತವಾಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ‘ಬಿಜೆಪಿ ಮೀಸಲಾತಿ ವಿರೋಧಿ’ ಎಂದು ಟೀಕಿಸಿವೆ.
‘ಬಿಜೆಪಿ ಹಾಗೂ ಆರ್ಎಸ್ಎಸ್ ಮೀಸಲಾತಿ ತೆಗೆದು ಹಾಕಲು ಮೊದಲಿನಿಂದಲೂ ಪ್ರಯತ್ನಿಸುತ್ತಿವೆ. ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿ ನೀಡಿರುವುದು ಬಿಜೆಪಿ ಪಾಲಿಗೆ ತಲೆನೋವಾಗಿದೆ’ ಎಂದು ಕಾಂಗ್ರೆಸ್ ವಕ್ತಾರ ಹಿರೇನ್ ಬಂಕಾರ್ ತಿಳಿಸಿದ್ದಾರೆ.
‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ’ ಎಂದು ಗುಜರಾತ್ ಎಎಪಿ ಘಟಕದ ಅಧ್ಯಕ್ಷ ಇಸುದಾನ್ ಗಧ್ವಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಮತ್ತು ಇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ಸವಿಧಾನ ಮತ್ತು ಮೀಸಲಾತಿ ಕುರಿತು ಮಾತಾಡ್ತಾರೆ….
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…