ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉಪಸ್ಥಿತಿಯಲ್ಲಿ 124ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಜೂನ್ 27 ರಂದು ಅಪರಾಹ್ನ 3 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು…
ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ…
ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ ಸಮುದಾಯ ಭವನಗಳ ನಿರ್ಮಾಣ…
ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ…
ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು…
ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ…