ದೆಹಲಿಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ದೆಹಲಿ ವಿಧಾನಭೆಯಲ್ಲಿ 70 ಕಕ್ಷೇತ್ರಗಳು. ಈ ಚುನಾವಣೆಯಲ್ಲಿ ಬಿಎಸ್ಪಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಬಿಎಎಸ್ಪಿಯು ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಸಮಾನ ಮತ್ತು ಆಮ್ ಆದ್ಮಿ ಪಕ್ಷ ಸಮಾನ ಎಲ್ಲಾ ಪಕ್ಷಗಳು ಸ್ವಾತಂತ್ರ ಸ್ಪರ್ಧೆ ಮಾಡ್ಲಿದಾರೆ.
ದೆಹಲಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ದೆಹಲಿ ವಿಧಾನಸಭೆಯು 70 ಸೀಟುಗಳನ್ನು ಹೊಂದಿದ್ದು, 70 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಬಿಎಎಸ್ಪಿಯು ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಸಮಾನ ಅಂತರ ಕಾಪಾಡಿಕೊಂಡಿದೆ.
ಜನವರಿ ಎರಡನೇ ವಾರದಲ್ಲಿ ಬಿಎಸ್ಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇನ್ನು ದೆಹಲಿಯನ್ನು ಐದು ವಲಯಗಳನ್ನಾಗಿ ವಿಂಗಡಿಸಿಕೊಂಡಿದ್ದು. ವಲಯವಾರು ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಚಿಂತನೆ ನಡೆದಿದೆ. ಇಲ್ಲಿ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದೆ. ಆಮ್ ಆದ್ಮಿ ಪಾರ್ಟಿಯು ಇಲ್ಲಿ ಕಳೆದ ಎರಡು ಅವಧಿಯಿಂದ ಇಲ್ಲಿ ಅಧಿಕಾರದಲ್ಲಿ ಇದೆ. ಆದರೆ, ಆಮ್ ಆದ್ಮಿ ಪಾರ್ಟಿಗೆ ಈ ಬಾರಿ ಪೂರಕ ವಾತಾವರಣ ಇಲ್ಲ. ಮದ್ಯ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರು ಸೇರಿದಂತೆ ಹಲವು ಪ್ರಮುಖ ಸಚಿವರೇ ಜೈಲು ಸೇರಿದ್ದರು. ಹೀಗಾಗಿ, ಎಎಪಿಗೆ ಹಿನ್ನಡೆ ಉಂಟಾಗಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಅಲ್ಲದೆ ಹಲವು ಸಮಸ್ಯೆಗಳಿವೆ. ಎಎಪಿ ಕಳೆದ ಮೂರು ವರ್ಷಗಳಿಂದ ಗವರ್ನರ್ನೊಂದಿಗೆ ಗುದ್ದಾಟ ಹಾಗೂ ಮದ್ಯ ನೀತಿ ಹಗರಣದ ಸಂಕಷ್ಟದಲ್ಲೇ ಕಳೆದಿದೆ. ಹೀಗಾಗಿ, ಕಳೆದ ಬಾರಿಯಂತೆ ದೆಹಲಿಯಲ್ಲಿ ಆಡಳಿತ ನೀಡಲು ಸಾಧ್ಯವಾಗಿಲ್ಲ. ಈ ಎಲ್ಲಾ ಕಾರಣಗಳಿಂದ ಎಎಪಿಗೆ ಈಗಾಗಲೇ ಈ ಚುನಾವಣೆ ಸವಾಲಾಗಿದೆ. ಇದರ ನಡುವೆ ಚುನಾವಣಾ ರಣಾಂಗಣಕ್ಕೆ ಬಿಎಸ್ಪಿ ಎಂಟ್ರಿ ಕೊಡ್ತಿದೆ. ಇದು ಎಎಪಿಗೆ ಡಬ್ಬಲ್ ಟೆನ್ಶನ್ ಮಾಡಿದೆ.
15ರ ಒಳಗೆ ಅಂತಿಮ ಪಟ್ಟಿ: ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿವೆ. ಈ ಕ್ಷೇತ್ರಗಳಲ್ಲಿ ಬಿಎಸ್ಪಿ ಜನವರಿ 15ರ ಒಳಗಾಗಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಸ್ಥಳೀಯ ನಾಯಕರು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಅಭ್ಯರ್ಥಿಗಳ ಲಿಸ್ಟ್ ಕಳುಹಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…