ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ ವಲಯಗಳ ಒಟ್ಟು 45 ಮಾನದಂಡಗಳ ಆಧಾರದ ಮೇಲೆ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಂಡಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಮೂರು ತಿಂಗಳಲ್ಲಿ ಸರಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲಿದೆಯೆಂದು ಸಮಿತಿಯ ಅಧ್ಯಕ್ಷರಾದ ಪ್ರೊ.ಗೋವಿಂದರಾವ್ ಇಂದಿಲ್ಲಿ ತಿಳಿಸಿದರು.
ಬೀದರ ಜಿಲ್ಲಾ ಪಂಚಾಯತನಲ್ಲಿAದು ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೀದರ ಸೇರಿ ಈಗಾಗಲೇ 28 ಜಿಲ್ಲೆಗಳಲ್ಲಿ ಅಧ್ಯಯನ ಪೂರ್ಣಗೊಂಡಿದೆ. ಡಾ.ಡಿ.ಎಂ. ನಂಜುoಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ಧಿ ಹಾಗೂ ಬದಲಾವಣೆಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗೆ ಅಗತ್ಯವಿರುವ ಅಂಶಗಳ ವರದಿಯನ್ನು ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಅವರು ತಿಳಿಸಿದರು.
ರಾಜ್ಯದಲ್ಲಿ 153 ಹಿಂದುಳಿದ ತಾಲ್ಲೂಕುಗಳಿವೆ. ನೀರಾವರಿ, ಮೂಲಸೌಕರ್ಯ, ಕೈಗಾರಿಕೆ, ತಲಾ ಆದಾಯ, ಉದ್ಯೋಗ, ಕೃಷಿ ಮುಂತಾದ ಐದು ಪ್ರಮುಖ ವಲಯಗಳನ್ನು ಗುರುತಿಸಿ ವಾಸ್ತವಾಂಶ ಆಧರಿಸಿ ವರದಿ ಸಿದ್ಧಪಡಿಸಲಾಗುದೆಂದರು. ಉದ್ಯೋಗಾವಕಾಶಗಳ ಸೃಷ್ಠಿ, ಉತ್ತಮ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಮಹಿಳಾ ಆಧಾರಿತ ಘಟಕಗಳು, ತಂತ್ರಜ್ಞಾನ, ಕೈಗಾರಿಕೆಗಳ ಸ್ಥಾಪನೆಯಂತಹ ಸಲಹೆಗಳು, ಇಂದು ಜನಪ್ರತಿನಿಧಿಗಳಿಂದ ಹಾಗೂ ತಜ್ಞರಿಂದ ಬಂದಿವೆAದರು. ರಾಜ್ಯದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ 2007 ರಿಂದ 2023 ರವರೆಗೆ 43456 ಕೋಟಿ ಶಿಫಾರಸ್ಸು ಮಾಡಲಾಗಿತ್ತು. ಅದರಲ್ಲಿ 35380 ಕೋಟಿ ಬಿಡುಗಡೆ ಆಗಿ 32610 ಕೋಟಿ ಖರ್ಚಾಗಿದೆ ಎಂದರು.
ರಾಜ್ಯದ ನಾಲ್ಕು ವಿಭಾಗಗಳ ಪೈಕಿ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಹಿಂದುಳಿದ ಪ್ರದೇಶಗಳಿವೆ. ತಾಲ್ಲೂಕಾ ಮಟ್ಟದಲ್ಲಿ ಹೋಗಿ ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದೆಂದರು. ರಾಜ್ಯದ ಕಿರೀಟ ಪ್ರಾಯವಾಗಿರುವ ಬೀದರ ಜಿಲ್ಲೆಯಲ್ಲಿ 4 ಅತ್ಯಂತ ಹಿಂದುಳಿದ ತಾಲ್ಲೂಕುಗಳಿವೆ. 2014-15ರ ಜಿಲ್ಲಾ ಮಾನವ ಅಭಿವೃದ್ಧಿ ವರದಿಯಂತೆ ಬೀದರ ಜಿಲ್ಲೆಯು ರಾಜ್ಯದಲ್ಲಿ 22ನೇ ಸ್ಥಾನದಲ್ಲಿರುತ್ತದೆ. 2025ನೇ ಅಂಕಿ ಅಂಶಗಳ ಪ್ರಕಾರ ಬೀದರ ಜಿಲ್ಲೆಯ 2022ನೇ ಸಾಲಿನ ಜಿಡಿಡಿಪಿ 2844018.00 ಲಕ್ಷಗಳಾಗಿವೆ ಎಂದರು.
ಬೀದರ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅಭಿವೃದ್ಧಿ, ಸಂಪರ್ಕ ಸುಧಾರಣೆ, ಕೌಶಲ್ಯ ಅಭಿವೃದ್ಧಿ, ಶಿಕ್ಷಕರ ಭರ್ತಿ ಹಾಗೂ ತರಬೇತಿ, ಉನ್ನತ ಹಾಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿ, ವಲಸೆ, ಕೃಷಿ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಮುಂತಾದ ಸಲಹೆಗಲನ್ನು ಸಮಿತಿಯು ಆಲಿಸಿತು.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ, ರಾಜ್ಯ ಸರ್ಕಾರ 2024 ರಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲ ಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗದಿಪಡಿಸಲಿದೆ. ಸಮಿತಿಯು 3 ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದರು.
ತಲಾ ಆದಾಯ ಒಂದೇ ಸೂಚ್ಯಂಕ ಆಗಬಾರದು ವಾಸ್ತವಾಂಶದ ಆಧಾರದ ಮೇಲೆ ಅಧ್ಯಾಯನದ ವರದಿ ನಡೆಸುವಂತೆ ಸಲಹೆ ನೀಡಿದರು. ಹೋಬಳಿವಾರು, ತಾಲೂಕಾವಾರು ನೀರಾವರಿ, ಕೃಷಿ, ಉದ್ಯೋಗ ಸಮಸ್ಯೆ, ಶಿಕ್ಷಣ ಸಮಸ್ಯೆ ಅಪೌಷ್ಟಿಕತೆ ಸಮಸ್ಯೆ, ವಲಸೆ ಸಮಸ್ಯೆ ಸಹ ಅಧ್ಯಾಯನ ಮಾಡುವಂತೆ ತಿಳಿಸಿದರು. ಪ್ರಾಥಮಿಕ, ಪ್ರೌಢ, ಪದವಿ ಶಿಕ್ಷಣ ಸುಧಾರಣೆ ಮಾಡುವ ಜೋತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದರು. ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5000 ಕೋಟಿ ನೀಡಿದ್ದೆವೆ ಹಾಗೂ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಮತ್ತು ಮುಂದಿನ ದಿನಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ವಿಧಾನಪರಿಷತ್ ಶಾಸಕರಾದ ಡಾ.ಎಂ.ಜಿ.ಮೂಳೆ, ನಗರಸಭೆ ಅಧ್ಯಕ್ಷರಾದ ಎಂ.ಡಿ.ಗೌಸ್, ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ.ಶೆಟಕಾರ, ವಕೀಲರ ಸಂಘದ ಅಧ್ಯಕ್ಷ ಅಶೋಕ ಮನೂರೆ, ಶಿಕ್ಷಣ ತಜ್ಞರಾದ ಪ್ರೊ.ಜಗನ್ನಾಥ ಹೆಬ್ಬಾಳೆ, ಎಸ್.ಎಂ.ಜನವಾಡಕರ್, ಉದ್ಯಮಿ ಬಸವರಾಜ ಧನ್ನೂರ ಹಾಗೂ ಇತರರು ತಮ್ಮ ಸಲಹೆಗಳನ್ನು ಸಮಿತಿಗೆ ತಿಳಿಸಿದರು.
ಸಮಿತಿಯ ಕಾರ್ಯದರ್ಶಿ ಡಾ.ಆರ್.ವಿಶಾಲ, ಸದಸ್ಯರಾದ ಪ್ರೊ.ಸಂಗೀತಾ ಕಟ್ಟಿಮನಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ವೇದಿಕೆಯಲ್ಲಿದ್ದರು.