09/06/2025 10:36 AM

Translate Language

Home » ಲೈವ್ ನ್ಯೂಸ್ » ಮೂರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟನೆ!

ಮೂರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟನೆ!

Facebook
X
WhatsApp
Telegram


10 ಡಿಸೆಂಬರ್24.:- ಉದ್ಯಮಗಳನ್ನು ಪ್ರಾರಂಭಿಸಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ಪಡೆದು ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಿ ಆರ್ಥಿಕವಾಗಿ ಅಭಿವೃಧ್ಧಿ ಸಾಧಿಸಬೇಕು ಎಂದು ಪ್ರಕಾಶ ಸೂರ್ಯವಂಶಿ, ಉಪ ನಿರ್ದೇಶಕರು ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಯಾತ ಬೀದರ ಅವರು ಹೇಳಿದರು.


ಅವರು ಇತ್ತೀಚಿಗೆ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ (ಸಿಡಾಕ್),ಬೀದರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲ್ಭೆಜು ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ಉದ್ಯಮಶಿಲಾತಾಭೀವೃದ್ಧಿ ತರಬೇತಿ ಕಾರ್ಯಕ್ರವ್ಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ, ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ ಬ್ಯಾಂಕ್ ವ್ಯವಹಾರಗಳು, ಉದ್ಯಮ ಸ್ಥಾಪನೆಗೆ ಇರುವ ಸಾಲ ಸೌಲಭ್ಯಗಳು ಮತ್ತು ಇತರ ಸಂಬAಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಾಕಷ್ಟು ಅವಕಾಶಗಳು ಲಭ್ಯವಿರುತ್ತದೆ. ನಮ್ಮ ದೇಶದಲ್ಲಿ ಯುವ ಜನ ಹೆಚ್ಚಿನ ಸಂಖೆಯಲ್ಲಿದ್ದು ಬುಧ್ಧಿವಂತರಿದ್ದಾರೆ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಶವಿರುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಬೀದರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಮನೋಜಕುಮಾರ ಕುಲP್ಪರ್ಣಿ, ಅಶ್ಫಕ ಅಹ್ಮದ, ಉಪನ್ಯಾಸಕರು ಸಿಡಾಕ್ ಬೀದರ, ಶ್ರೀನಿವಾಸ ರೆಡ್ಡಿ, ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬೀದರ, ಡಾ. ವಿದ್ಯಾ ಪಾಟೀಲ,ಉಪನ್ಯಾಸಕರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬೀದರ, ಮಲ್ಲಪ್ಪಾ, ಜಿಲ್ಲಾ ತರಬೇತಿ ಅಧಿಕಾರಿ, ಸಿಡಾಕ್,ಬೀದರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶೃತಿ,.ಬಿ.ಕಾಂ ಅಂತಿಮ ವರ್ಷದ ವಿದ್ಯಾಥಿನಿ ನಿರೋಪಿಸಿದರು ಹಾಗು ಸ್ವಾಗತಿಸಿದರು, ವಂದಿಸಿದರು,

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!