ದಲಿತ ಯುವಕನ ಮೇಲ್ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ,ಯುವಕ ಮೃತ್ಯು.!

ಬೀದರ.08.ಜನೆವರಿ.25 ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ನಿವಾಸಿಯಾದ ಸುಮಿತ ಮತ್ತು ಔರಾದ ತಾಲೂಕಿನ ರಕ್ಷಾಳ ಗ್ರಾಮದ ಮೇಲ್ಜಾತಿ ಬಾಲಕಿಯನ್ನು ಪ್ರೀತಿ ಮಾಡಿದ್ದಕ್ಕಾಗಿ ದಲಿತ ಯುವಕನಿಗೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನಪ್ಪಿದ ಘಟನೆ ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ

ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ರವಿವಾರದಂದು ನಮ್ಮ ಮನೆ ಕಡೆಗೆ ಬಾ ಎಂದು ಸುಮಿತ್ ನನ್ನು ಹುಡುಗಿ ಕರೆದಿದ್ದಳು. ಹುಡುಗಿಯನ್ನು ಭೇಟಿ ಮಾಡಲು ಹೋದ ಸುಮಿತ್ ನನ್ನು, ಹುಡುಗಿಯ ಅಪ್ಪ, ಅಣ್ಣ ಮತ್ತು ಸಂಬಂಧಿಕರು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು.

ಸುಮಿತ್ ಮನೆಯಿಂದ ಹೊರಗಡೆ ಹೋದ ನಂತರ ಬಾಲಕಿಯ ಅಣ್ಣ ಮತ್ತು ಆತನ ಗೆಳೆಯರು ಸೇರಿಕೊಂಡು ಮತ್ತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಸುಮಿತ್ ನ ಮನೆಗೆ ಕರೆ ಮಾಡಿ ಆತನನ್ನು ಕರೆದೋಯ್ಯಲು ಹೇಳಿದ್ದಾರೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಸುಮಿತ್ ನ ತಂದೆ ಹಾಗೂ ಸಹೋದರರು ಘಟನೆ ನಡೆದ ಸ್ಥಳಕ್ಕೆ ಬಂದು, ಸುಮಿತ್ ನನ್ನು ತಕ್ಷಣವೇ ಠಾಣಾ ಕುಶನೂರ್ ಸರಕಾರಿ ಆಸ್ಪತ್ರೆಗೆ ಕರೆದೋಯ್ದಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮಹಾರಾಷ್ಟ್ರದ ಉದಗೀರ್ ಲಾತೂರ್ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆ ನೀಡಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಿತ್ ಮೃತಪಟ್ಟಿದ್ದಾನೆ. ಇಂದು ಬೀದರ್ ಆಸ್ಪತ್ರೆಗೆ ಮೃತದೇಹ ತಂದಿದ್ದೇವೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕಮಲನಗರ ತಾಲೂಕಿನ ಠಾಣಾ ಕುಶನೂರ. ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago