ಮೇ 20ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರೆ ಸಂಘಟನೆಗಳು

ಬೆಂಗಳೂರು.11.ಮೇ.25:- ಕೇಂದ್ರ ಸರ್ಕಾರದ ನೀತಿ ವಿರುದ್ಧ ಜಾಯಿಂಟ್ ಕಮಿಟಿ ಆಫ್ ಟ್ರೇಡ್ ಯೂನಿಯನ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗಳು ಜಂಟಿಯಾಗಿ ಮೇ 20ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನು ರದ್ದುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ.

ಮೇ 20ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರೆ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ಸಂಯೋಜಕ ಬಡಗಲಪುರ ನಾಗೇಂದ್ರ ಶನಿವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳ ಶಾಹಿಗಳ ಪರವಾಗಿ ರೂಪಿಸಿದ ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ರದ್ದು ಪಡಿಸಬೇಕು.

ಇಂದಿನ ಬೆಲೆಗೆ ಅನುಗುಣವಾಗಿ ಎಲ್ಲಾ ಸಂಘಟಿತ, ಅಸಂಘಟಿತ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ 36,000 ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ಟ್ರೈನಿ ಹೆಸರಲ್ಲಿ ಕಾರ್ಮಿಕರ ನೇಮಕ ಮಾಡಿಕೊಳ್ಳವುದನ್ನು ಸ್ಥಗಿತಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ರೈತರ ಬದುಕಿಗೆ ಮಾರಕವಾಗಿರುವ ಭೂ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಜಾನುವಾರು ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸುವ ತೀರ್ಮಾನ ಕೈಗೊಳ್ಳಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾನೂನು ರೂಪಿಸಬೇಕು.

ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ಸಮಗ್ರ ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆಗಳನ್ನು ಜಾರಿಗೊಳಿಸಬೇಕು.

2022ರ ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆದು ವಿದ್ಯುತ್ ಖಾಸಗೀಕರಣ ನಿಲ್ಲಿಸಬೇಕು. ಬಗರ್ ಹುಕುಂ ಸಮಸ್ಯೆ ಬಗೆಹರಿಸಲು ತಕ್ಷಣ ಉನ್ನತ ಮಟ್ಟದ ಸಭೆ ಕರೆದು ತಜ್ಞರ ಸಮಿತಿ ರಚಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

5 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

8 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

8 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

8 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

15 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

15 hours ago