ಬೀದರ.29. ಮೇ.25:- ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೇ.31 (ಶನಿವಾರ) ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ರ ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ದಕ್ಷಿಣ ಮಧ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾನಾಪುರದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಯೋಜನೆ: ವಿಕಾರಾಬಾದ್ – ಬೀದರ್ – ಪಾರ್ಲಿ ರೈಲು ಮಾರ್ಗದಲ್ಲಿರುವ ಖಾನಾಪುರ ಜಂಕ್ಷನ್ ನಿಲ್ದಾಣವು, ಕಲಬುರಗಿ, ಬೀದರ್ ಮತ್ತು ಭಾಲ್ಕಿ ರೈಲ್ವೆ ನಿಲ್ದಾಣಗಳನ್ನು ಸಂಪರ್ಕಿಸುವ ಪ್ರಮುಖ ಕೇಂದ್ರೀಯ ನಿಲ್ದಾಣವಾಗಿದೆ. ಈ ನಿಲ್ದಾಣವು ಜಂಕ್ಷನ್ನಾಗಿ ಇರುವ ಕಾರಣ, ಸರಕು ರೈಲುಗಳ ಚಲನೆಗೆ ಅನುಕೂಲಕರವಾಗಿದೆ.
ಇಂತಹ ಪ್ರಾಮುಖ್ಯತೆಯ ಹಿನ್ನೆಲೆಯಲ್ಲಿ, ಖಾನಾಪುರದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಹೊಸ ಸರಕು ಸಾಗಣೆ ಶೆಡ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿ ಜೂನ್ 2026 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ.
ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣ: ಸಿಕಂದರಾಬಾದ್ ವಿಭಾಗದ ವಿಕಾರಾಬಾದ್ – ಪಾರ್ಲಿ ವೈಜನಾಥ್ ಮಾರ್ಗದಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 71, ಭಾಲ್ಕಿ ನಿಲ್ದಾಣದ ಬಳಿ ಇದ್ದು, ಭಾಲ್ಕಿ ಮತ್ತು ಬೀದರ್ ಪಟ್ಟಣಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗದಲ್ಲಿದೆ.
ಈ ಮಾರ್ಗದ ವಾಹನ ಸಂಚಾರ ದಟ್ಟವಾಗಿದ್ದು, ಲೆವೆಲ್ ಕ್ರಾಸಿಂಗ್ ಗೇಟ್ ನಿಂದ ಆಗುವ ತಡೆಗಳನ್ನು ನಿವಾರಿಸಲು 10.85 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕೆಳ ಸೇತುವೆ (RUB ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈ ಸೇತುವೆ ನಿರ್ಮಾಣದಿಂದ ಭಾಲ್ಕಿ ಮತ್ತು ಬೀದರ್ ನಡುವಿನ ವಾಹನ ಸಂಚಾರ ಸುಗಮವಾಗಲಿದ್ದು, ರಸ್ತೆ ಹಾಗೂ ರೈಲು ಪ್ರಯಾಣಿಕರ ಸುರಕ್ಷತೆ ಹೆಚ್ಚಳವಾಗುತ್ತದೆ. ಜೊತೆಗೆ, ಪ್ರಯಾಣದ ಸಮಯವೂ ಕಡಿಮೆಯಾಗಲಿದೆ.
ಈ ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…