ತುಮಕೂರು.27.ಜನವರಿ.25:-: ತುಮಕೂರಿನ ಹಳ್ಳಿಯೊಂದರಲ್ಲಿ ಚಾಲಾಕಿ ದಂಪತಿ ನಂಬಿಕಸ್ಥ 35 ಜನರ ಆಧಾರ್ ಕಾರ್ಡ್ ಪಡೆದು ಅವರ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಸಾಲವನ್ನು ಪಡೆದು, ಇದೀಗ ಊರನ್ನು ಬಿಟ್ಟು ಓಡಿ ಹೋಗಿದ್ದಾರೆ.ನಮ್ಮ ನಡುವೆ ತುಂಬಾ ಆತ್ಮೀಯರಂತೆ ಇದ್ದು, ಒಳಗೊಳಗೆ ಮೆಣಸು ಅರೆಯುವವರ ಸಂಖ್ಯೆಗೆ ಕಡಿಮೆಯೇನಿಲ್ಲ.
ಅವರು ನಮ್ಮಂತೆಯೇ ಇದ್ದು, ನಮ್ಮನ್ನು ಉದ್ಧಾರ ಮಾಡಿಬಿಡುತ್ತೇವೆ ಎಂದೆಲ್ಲಾ ನಯವಾಗಿ ಮಾತನಾಡಿ ನಮಗೆ ಮೋಸ ಮಾಡುವವರು ಕೂಡ ಇದ್ದಾರೆ. ಇದೇ ರೀತಿ ಹಳ್ಳಿಯೊಂದರಲ್ಲಿ ನೆಲೆಸಿದ್ದ ಚಾಲಾಕಿ ದಂಪತಿ ಸ್ವಲ್ಪ ಶಿಕ್ಷಣವಂತರಾಗಿದ್ದು, ಅಮಾಯಕ ರೈತ ಕುಟುಂಬ 35 ಜನ ಮಹಿಳೆಯರಿಗೆ ಮೋಸ ಮಾಡಿದ್ದಾರೆ.
ನಮಗೆ ಕಷ್ಟ ಬಂದಿದೆ, ನಿಮ್ಮ ಆಧಾರ್ ಕಾರ್ಡ್ಗಳನ್ನು ಕೊಟ್ಟರೆ ಅದರ ಮೇಲೆ ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದು ಅದನ್ನು ನಾವೇ ತೀರಿಸುತ್ತೇವೆ ಎಂದು ಆಧಾರ್ ಕಾರ್ಡ್ ಪಡೆದುಕೊಂಡಿದ್ದಾರೆ. ನಂತರ ಸಾಲನ್ನು ತೀರಿಸದೇ ಊರನ್ನು ಬಿಟ್ಟು ರಾತ್ರೋ ರಾತ್ರಿ ಪರಾರಿ ಆಗಿದ್ದಾರೆ.
ಈ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮೊದಲೇ ಹಳ್ಳಿ ಜನ ಅಲ್ವಾ, ಮುಗ್ದರು. ‘ಹಳ್ಳಿ ಜನ, ಒಳ್ಳೆ ಜನ’ ಎಂಬ ಮಾತು ಕೂಡ ಇವರ ವಿಚಾರದಲ್ಲಿ ಸತ್ಯವೇ ಆಗಿದೆ.
ಏಕೆಂದರೆ ಗಂಡ, ಹೆಂಡತಿ ಮನೆ ಬಾಗಿಲಿಗೆ ಬಂದು ಕಷ್ಟ ಎಂದು ಹೇಳಿಕೊಂಡಾಗ ಅವರಿಗೆ ಮನಸ್ಸು ಕರಗಿ ತಮ್ಮ ಕೈಲಾದ ಸಹಾಯವನ್ನು ಮಾಡಲು ಮುಂದಾಗಿದ್ದೇ ಈಗ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ದೊಡ್ಡ ಹೊಸಳ್ಳಿ ಗ್ರಾಮದಲ್ಲಿ ನೆಲೆಸಿದ್ದ ಪ್ರತಾಪ್ ಹಾಗೂ ರತ್ನಮ್ಮ ದಂಪತಿ ಜನರಿಗೆ ಟೋಪಿ ಹಾಕಿ ಪರಾರಿಯಾಗಿದ್ದಾರೆ.
ದೊಡ್ಡ ಹೊಸಹಳ್ಳಿ ಗ್ರಾಮದ ಸುಮಾರು 35 ಮಂದಿಯ ಆಧಾರ್ ಕಾರ್ಡ್ ಪಡೆದು ವಂಚನೆ ಮಾಡಿದ್ದಾರೆ. ಆರಂಭದಲ್ಲಿ 10 ಕ್ಕೂ ಹೆಚ್ಚು ಮೈಕ್ರೋಫೈನಾನ್ಸ್ ಕಂಪನಿಯಿಂದ 50 ಲಕ್ಷಕ್ಕೂ ಹೆಚ್ಚು ಸಾಲ ಪಡೆದು ಪರಾರಿಯಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜನರ ಹೆಸರಲ್ಲಿ ತಾವೇ ಸಾಲ ಮಂಜೂರು ಮಾಡಿಕೊಂಡು, ತಾವೇ ಸಾಲದ ಹಣ ಕಟ್ಟುತ್ತೇವೆ ಎಂದು ಪಂಗನಾಮ ಹಾಕಿದ್ದಾರೆ.
ಹಲವು ಮೈಕ್ರೋಫೈನಾನ್ಸ್ ಸಂಸ್ಥೆಗಳ ಜೊತೆ ಒಡನಾಟ ಇಟ್ಟುಕೊಂಡಿದ್ದ ಖತರ್ನಾಕ್ ದಂಪತಿ, ತಾವು ಸಂಘ ಮಾಡಿಕೊಂಡಿದ್ದು, ಇವರೆಲ್ಲರ ಹೆಸರಿನಲ್ಲಿಯೂ ಸಾಲವನ್ನು ನೀಡುವಂತೆ ಎಷ್ಟು ಸಾಧ್ಯವೋ ಅಷ್ಟು ಸಾಲವನ್ನು ಪಡೆದಿದ್ದಾರೆ.
ಇದೀದ ಸಾಲವನ್ನು ಮರುಪಾವತಿ ಮಾಡುವಂತೆ ಆಧಾರ್ ಕಾರ್ಡ್ ದಾಖಲೆಗಳನ್ನು ಹಿಡಿದು ಸಾಲಗಾರರ ವಿಳಾಸಕ್ಕೆ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಬಂದಿದ್ದಾರೆ. ಇದೀಗ ಆಧಾರ್ ಕೊಟ್ಟವರಿಗೆ ಸಾಲ ಮರುಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದ್ದಾರೆ.
ಕಳೆದ 2 ತಿಂಗಳ ಹಿಂದೆಯೇ ಪ್ರತಾಪ್ ಮತ್ತು ರತ್ನಮ್ಮ ಪರಾರಿ ಆಗಿದ್ದು, ಗ್ರಾಮಸ್ಥರಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ನೊಟೀಸ್ ಕೊಟ್ಟ ನಂತರವೇ ತಾವು ವಂಚನೆಗೆ ಒಳಗಾಗಿದ್ದೇವೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಗ್ರಾಮಸ್ಥರು ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ.
ಮೈಕ್ರೋ ಫೈನಾನ್ಸ್ ಮೊಲಕ ಬೆರೇವರ್ ಆಧಾರ್ ಕಾರ್ಡ್ ಮೇಲೇ ಕದ್ಧಿ ಸಾಲಾ ಮಾಡಿ ಪರಾರಿ ಆಗಿರುವ ದಂಪತಿ ಮೇಲೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆಎಂದು ಮಾಹಿತಿ ನೀಡಿದ್ದಾರೆ
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…