ಯಾದಗಿರಿ.15.ಜನವರಿ.25.:-ಮೈಲಾಪುರದ ಮಲ್ಲಯ್ಯನ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ. ಕುರಿ ಮರಿಗಳನ್ನು ಹಾರಿಸುವ ಪದ್ಧತಿ ಯಾದಗಿರಿ ಜಿಲ್ಲೆಯಾದ ನಂತರ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ಆದರೆ ಈ ವರ್ಷ ಇಂದು ನಡೆದ ಮೈಲಾಪುರದ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಕುರಿ ಮರಿಗಳು ಹಾರಿಸಿದ್ದು ಅನೇಕ ವರ್ಷಗಳಿಂದ ನಿಷೇಧವಿದ್ದರೂ ಇಂದು ಜಿಲ್ಲಾಡಳಿತ ಮುಂಜಾಗ್ರತವಾಗಿ ಮೈಲಾಪುರಕ್ಕೆ ತೆರಳುವ ಎಲ್ಲಾ ರಸ್ತೆಗಳು ಮಾರ್ಗ ಮಧ್ಯದಲ್ಲಿ ಪೊಲೀಸರು ಮುಂಜಾಗ್ರತವಾಗಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಕುರಿ ಮರಿಗಳು ಹೋಗದಂತೆ ತಡೆಯಬೇಕಾಗಿತ್ತು.
ಆದರೆ ಜಿಲ್ಲಾಡಳಿತದ ನಿಷ್ಕಾ ಳಜಿಯಿಂದ ಇವತ್ತು ಜಾತ್ರೆಯಲ್ಲಿ ಕುರಿ ಮರಿಗಳನ್ನು ಹಾರಿಸಿ ಕಾನೂನು ಬಾಹಿರವಾಗಿ ಯಾವುದೇ ಭಯವಿಲ್ಲದೆ ಮೌಡ್ಯಾಚರಣೆ ನಡೆದಿರುತ್ತದೆ. ಈ ಒಂದು ಘಟನೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣಾ ಖಂಡಿಸುತ್ತದೆ.
ಇನ್ನು ಮುಂದಾದರೂ ಜಿಲ್ಲಾಡಳಿತ ಇಡೀ ಜಿಲ್ಲೆಯಲ್ಲಿ ಮತ್ತು ವಿಶೇಷವಾಗಿ ಸುರಪೂರು ತಾಲೂಕಿನಲ್ಲಿ ಜನವರಿ ಮತ್ತು ಫೆಬ್ರವರಿ ತಿಂಗಳು ಅಂತ್ಯದವರೆಗೆ ದೇವತೆಗಳ ಹೆಸರಿನಲ್ಲಿ ಕುರಿ ಕೋಣಗಳನ್ನು ಬಲಿಕೊಡುವ ಪದ್ಧತಿ ನಡೆಯುತ್ತದೆ.
ಇನ್ನು ಮುಂದಾದರು ಜಿಲ್ಲೆಯಲ್ಲಿ ನಡೆಯುವ ಇಂತಹ ಅನಿಷ್ಟ ಪದ್ಧತಿಗಳನ್ನು ಜಿಲ್ಲಾಡಳಿತ ತಡೆಯಬಹುದೇ?ಎಂದು ಕಾದು ನೋಡಬೇಕಾಗಿದೆ ರಾಜ್ಯ ಸಂಘಟನಾ ಸಂಚಾಲಕರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ಬೆಂಗಳೂರು.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…