ಮೈಸೂರು ಮತ್ತು ಚಾಮರಾಜನಗರ ವಿವಿಯನ್ನು ವಿಲೀನಗೊಳಿಸಿದರೆ ಪ್ರತಿಭಟನೆ ನಡೆಸಲಾಗುವುದು: ಎನ್‌.ಮಹೇಶ.

ಚಾಮರಾಜನಗರ.16.ಫೆಬ್ರವರಿ.25: ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಇದೇ ಕಾರಣಕ್ಕೆ ಇಂದು ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಪ್ರಗತಿಪರ ಸಂಘಟನೆಗಳು ಮತ್ತು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಚಾಮರಾಜನಗರ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿ ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಏಳು ಹೊಸ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು.

ಅಲ್ಲದೇ ಅವುಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ವಿವಿ ಅಧ್ಯಯನ ಸಮಿತಿಯೂ ಈ ವಿಶ್ವ ವಿದ್ಯಾನಿಲಯಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು 342 ಕೋಟಿ ರೂ. ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಿರುವಾಗ ಸರ್ಕಾರ ಈ ಹೊಸ ವಿವಿಗಳನ್ನು ಮೂಲ ವಿವಿಗಳೊಂದಿಗೆ ಮತ್ತೆ ವಿಲೀನ ಮಾಡಲು ಹೊರಟಿರುವುದು ಖಂಡನೀಯವಾಗಿದೆ ಎಂದು ಹೇಳಿದರು.

ಸರ್ಕಾರ ಈ ಏಳು ಹೊಸ ವಿವಿಗಳಿಂದ ಹಣದ ಹೊರೆ ಹೆಚ್ಚಾಗಲಿದ್ದು, ಯಾವುದೇ ಯಾವುದೇ ಲಾಭವಿಲ್ಲ ಎನ್ನುವುದು ಸರಿಯಲ್ಲ. ಇದು ಶಿಕ್ಷಣ ಕೇಂದ್ರವೇ ಹೊರತು ಯಾವುದೇ ಕಂಪನಿ ಅಲ್ಲ.

ಹೀಗಾಗಿ ಗ್ರಾಮೀಣ ಭಾಗದ ಮಕ್ಕಳ ಉನ್ನತ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಈ ವಿವಿಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಅಲ್ಲದೇ ಈ ವಿವಿಗಳ ಅಭಿವೃದ್ಧಿಗೆ ಪ್ರತಿ ವರ್ಷ 25 ಕೋಟಿ ರೂ. ಅನ್ನು ಹಂತ ಹಂತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಸರ್ಕಾರ ಈ ವಿವಿಗಳನ್ನು ಸ್ಥಾಪಿಸಿದ್ದು ಬಿಜೆಪಿ ಸರ್ಕಾರ. ನಾವೇಕೆ ಇವುಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬ ಮನೋಭಾವನೆಯಿಂದ ಇದೀಗ ವಿಲೀನಕ್ಕೆ ಹೊರಟಿದೆ.

ಒಂದು ವೇಳೆ ಚಾಮರಾಜನಗರ ವಿವಿಯನ್ನು ಮೈಸೂರು ವಿವಿಗೆ ವಿಲೀನ ಮಾಡಲು ಮುಂದಾದರೆ ವಿದ್ಯಾರ್ಥಿಗಳೊಂದಿಗೆ ನಮ್ಮ ಪಕ್ಷವೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಚಾಮರಾಜನಗರ ವಿವಿಗೆ ಯುಜಿಸಿ ಅನುಮೋದನೆ ದೊರೆತಿದ್ದು, 2ಎಫ್‌ ಮಾನ್ಯತೆ ಸಹ ಲಭಿಸಿದೆ. 2023 ರಿಂದ ಇಲ್ಲಿಯವರೆಗೂ ಸ್ವದೇಶಿ ಮತ್ತು ವಿದೇಶಿ ಸೇರಿ 10ಕ್ಕೂ ಅಧಿಕ ವಿವಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಅಲ್ಲದೇ ಈ ವಿವಿ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ 7686 ವಿದ್ಯಾರ್ಥಿಗಳಿದ್ದಾರೆ. ಅವರುಗಳಲ್ಲಿ 4315 ಯುವತಿಯರೇ ಉನ್ನತ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಆ ಹೆಣ್ಣು ಮಕ್ಕಳ ಭವಿಷ್ಯವನ್ನು ರೂಪಿಸುವುದಕ್ಕಾದರೂ ಈ ವಿವಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಪ್ರಗತಿಪರ ಸಂಘಟನೆಗಳು ಮತ್ತು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago