09/06/2025 10:32 AM

Translate Language

Home » ರಾಜ್ಯ » “ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ

“ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ

Facebook
X
WhatsApp
Telegram

ಕಲಬುರಾಗಿ.18.ಫೆ.25: ಕಲಬುರಗಿ ಜಿಲೆ ಜೇವರ್ಗಿ ತಾಲೂಕಿನ ಯಡ್ರಾಮಿಯೆಲ್ಲಿ ಮಹಿಳಾ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ಜನಪ್ರಿಯ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಭರವಸೆ ನೀಡಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಸಂಯುಕ್ತಾಶ್ರಯದಲ್ಲಿ ಸೋಮವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು  ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ನಂತರ ಸುಕನ್ಯಾ ಸಮೃದ್ದಿ ಯೋಜನೆಯ ಪಾಸ್‌ಬುಕ್ ಹಾಗೂ ಅನುಕಂಪ ಆಧಾರದ ಮೇಲೆ ನೇಮಕಾತಿಗೊಂಡ ಅಂಗನವಾಡಿ ಕಾಯಕರ್ತೆಯರಿಗೆ ಆದೇಶ ಪತ್ರ ವಿತರಣೆ ಮಾಡಿದರು.


ಸಿಡಿಪಿಒ ಸಂಗನಗೌಡ ಪಾಟೀಲ ಮಾತನಾಡಿದರು. ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಶ್ವನಾಥ ಬಿರಾದಾರ, ತಾಲ್ಲೂಕು ಪಂಚಾಯಿತಿ ಇಒ  ರವಿಚಂದ್ರರೆಡ್ಡಿ, ಪಿಎಸ್ಐ ಗಜಾನಂದ ಬಿರಾದಾರ ಆಗಮಿಸಿದ್ದರು. ದೀಪಾರೆಡ್ಡಿ ನಿರೂಪಿಸಿದರು, ಗಾಯತ್ರಿ ಹದನೂರ ವಂದಿಸಿದರು.



ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದಿಂದ ವಿವಿಧ ಬಡಾವಣೆಗಳ ಮೂಲಕ ಡಾ.ಅಂಬೇಡ್ಕರ್ ಭವನದವರೆಗೆ ಸುಕನ್ಯಾ ಸಮೃದ್ದಿ ಯೋಜನೆಯb ಜಾಗೃತಿಗಾಗಿ ಜಾಥಾ ಹಾಗೂ ಮಹಿಳೆಯರಿಂದ ಕುಂಭ ಕಳಸದ ಮೆರವಣಿಗೆ ನಡೆಸಲಾಯಿತು.

ಪ್ರಮುಖರಾದ ಶಿವಶರಣಪ್ಪ ಕೋಬಾಳ, ವಿಜಯಕುಮಾರ ಹಿರೇಮಠ, ರಿಯಾಜ್ ಪಟೇಲ, ರಾಜು ಮುತ್ತಕೋಡ, ಭೀಮರಾಯ‌ ನಗನೂರ ಸೇರಿದಂತೆ ನೂರಾರು ಜನ ಅಂಗನವಾಡಿ ಮೇಲ್ವಿಚಾರಕರು, ಸಹಾಯಕರು, ಮಕ್ಕಳು ಭಾಗವಹಿಸಿದ್ದರು.

ಯಡ್ರಾಮಿ ಗ್ರಾಮೀಣಭಾಗದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಮಾಡಿದ್ರೆ ಮಹಿಳಾ ಮತ್ತಷ್ಟು ಸಬಲೀಕರಣ ಆಗ್ಬಹುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!