“ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ

ಕಲಬುರಾಗಿ.18.ಫೆ.25: ಕಲಬುರಗಿ ಜಿಲೆ ಜೇವರ್ಗಿ ತಾಲೂಕಿನ ಯಡ್ರಾಮಿಯೆಲ್ಲಿ ಮಹಿಳಾ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ಜನಪ್ರಿಯ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಭರವಸೆ ನೀಡಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಸಂಯುಕ್ತಾಶ್ರಯದಲ್ಲಿ ಸೋಮವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು  ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ನಂತರ ಸುಕನ್ಯಾ ಸಮೃದ್ದಿ ಯೋಜನೆಯ ಪಾಸ್‌ಬುಕ್ ಹಾಗೂ ಅನುಕಂಪ ಆಧಾರದ ಮೇಲೆ ನೇಮಕಾತಿಗೊಂಡ ಅಂಗನವಾಡಿ ಕಾಯಕರ್ತೆಯರಿಗೆ ಆದೇಶ ಪತ್ರ ವಿತರಣೆ ಮಾಡಿದರು.


ಸಿಡಿಪಿಒ ಸಂಗನಗೌಡ ಪಾಟೀಲ ಮಾತನಾಡಿದರು. ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಶ್ವನಾಥ ಬಿರಾದಾರ, ತಾಲ್ಲೂಕು ಪಂಚಾಯಿತಿ ಇಒ  ರವಿಚಂದ್ರರೆಡ್ಡಿ, ಪಿಎಸ್ಐ ಗಜಾನಂದ ಬಿರಾದಾರ ಆಗಮಿಸಿದ್ದರು. ದೀಪಾರೆಡ್ಡಿ ನಿರೂಪಿಸಿದರು, ಗಾಯತ್ರಿ ಹದನೂರ ವಂದಿಸಿದರು.



ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದಿಂದ ವಿವಿಧ ಬಡಾವಣೆಗಳ ಮೂಲಕ ಡಾ.ಅಂಬೇಡ್ಕರ್ ಭವನದವರೆಗೆ ಸುಕನ್ಯಾ ಸಮೃದ್ದಿ ಯೋಜನೆಯb ಜಾಗೃತಿಗಾಗಿ ಜಾಥಾ ಹಾಗೂ ಮಹಿಳೆಯರಿಂದ ಕುಂಭ ಕಳಸದ ಮೆರವಣಿಗೆ ನಡೆಸಲಾಯಿತು.

ಪ್ರಮುಖರಾದ ಶಿವಶರಣಪ್ಪ ಕೋಬಾಳ, ವಿಜಯಕುಮಾರ ಹಿರೇಮಠ, ರಿಯಾಜ್ ಪಟೇಲ, ರಾಜು ಮುತ್ತಕೋಡ, ಭೀಮರಾಯ‌ ನಗನೂರ ಸೇರಿದಂತೆ ನೂರಾರು ಜನ ಅಂಗನವಾಡಿ ಮೇಲ್ವಿಚಾರಕರು, ಸಹಾಯಕರು, ಮಕ್ಕಳು ಭಾಗವಹಿಸಿದ್ದರು.

ಯಡ್ರಾಮಿ ಗ್ರಾಮೀಣಭಾಗದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಮಾಡಿದ್ರೆ ಮಹಿಳಾ ಮತ್ತಷ್ಟು ಸಬಲೀಕರಣ ಆಗ್ಬಹುದು.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

38 minutes ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

46 minutes ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

8 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

11 hours ago