ಯಳಂದೂರು: ಬೇಸಿಗೆ ಆರಂಭಗೊಂಡು ಜನರು ಹೆಚ್ಚಿನ ತಾಪಮಾನಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ಕುಡಿಯುವ ನೀರು, ತಂಪು ಪಾನೀಯ, ಮಜ್ಜಿಗೆ, ಎಳನೀರು, ಕಲ್ಲಂಗಡಿ, ಸೌತೆಕಾಯಿಗಳತ್ತ ಮುಖ ಮಾಡಿ ದೇಹವನ್ನು ತಂಪು ಮಾಡಿಕೊಳ್ಳಲು ಮುಂದಾಗಿದ್ದಾರೆ.
ಅದಲ್ಲದೇ ಪ್ರತಿನಿತ್ಯ ಸಾರ್ವಜನಿಕರು ತಮ್ಮ ಕೆಲಸಗಳ ನಿಮಿತ್ತ ಸರಕಾರಿ ಕಛೇರಿಗಳಿಗೆ ಆಗಮಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಏನಾದರೂ ದಾಹವಾದರೆ ಅವರು ಅಂಗಡಿಗಳಿಗೆ ಹೋಗಿ ಹಣ ನೀಡಿ ಕುಡಿಯುವ ನೀರಿನ ಬಾಟಲ್ ನ್ನು ತೆಗೆದುಕೊಳ್ಳಬೇಕು ಆದರಿಂದ ಸರಕಾರಿ ಕಛೇರಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ.
ಯಳಂದೂರಿನ ಕೆಲ ಸರಕಾರಿ ಕಛೇರಿಗಳಾದ ಕೃಷಿ ಇಲಾಖೆ, ತಾಲ್ಲೂಕು ಕಛೇರಿ, ತೋಟಗಾರಿಕೆ ಇಲಾಖೆ, ಕುಡಿಯುವ ನೀರು ನೈರ್ಮಲ್ಯ ಇಲಾಖೆ, ಅಭಿಯಂತರರ ಕಛೇರಿ, ಸಿಡಿಪಿಒ ಕಛೇರಿ, ಅರಣ್ಯ ಇಲಾಖೆ, ಇನ್ನೂ ಅನೇಕ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದೇ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ನೀರನ್ನೆ ಕೊಡದವರು ಇನ್ನೂ ಸಾರ್ವಜನಿಕರ ಕೆಲಸ ಮಾಡುತ್ತಾರೋ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.
ಶುದ್ದ ಕುಡಿಯುವ ನೀರನ್ನು ಕಛೇರಿಯೊಳಗೆ ಯಾರಿಗೂ ಕಾಣದೇ ಇರಿಸಿ ತಮ್ಮ ಕಛೇರಿ ಸಿಬ್ಬಂದಿಗಳು ಮಾತ್ರ ಕುಡಿಯುವುದಕ್ಕೆ ಸೀಮಿತವಾಗಿದೆ.
ಬೇಸಿಗೆ ಕಾಲವಾಗಿರುವುದರಿಂದ ದಯವಿಟ್ಟು ಸರಕಾರಿ ಕಛೇರಿಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಸಾರ್ವಜನಿಕರು ತಿಳಿಸಿದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…