ಚಾಮರಾಜನಗರ.02.ಏಪ್ರಿಲ್.25:- ಯಳಂದೂರು ಪಟ್ಟಣದ ತಾಲ್ಲೂಕು ಕಛೇರಿಯ ಸುತ್ತಲೂ ಪ್ಲಾಸ್ಟಿಕ್ ಮತ್ತು ಘನತ್ಯಾಜ್ಯ ವಸ್ತುಗಳಿಂದ ಕೂಡಿದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿನಿತ್ಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುತ್ತಿದ್ದಾರೆ.
ಕಛೇರಿಯ ಸುತ್ತಲೂ ಅಶಿಸ್ತುನಿಂದ ಕೂಡಿರುವುದನ್ನು ನೋಡಿ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ ಆದರೂ ತಾಲ್ಲೂಕು ಆಡಳಿತ ನಿರ್ಜೀವ ವಸ್ತುವಿನಂತಾಗಿದೆ. ಇದರಿಂದ ತನ್ನ ನಿರ್ಲಕ್ಷ್ಯ ತನವನ್ನು ತೋರಿಸುತ್ತದೆ.
ಗಿಡದ ಬಳ್ಳಿಗಳು ತಾಲ್ಲೂಕು ಆಡಳಿತ ಕಟ್ಟಡದ ಮೇಲೆ ಏರಿದೆ ಗಿಡದ ಬಳ್ಳಿಯ ಮೂಲಕ ಹಾವು ಚೇಳುಗಳು ಕಟ್ಟಡದೊಳಗೆ ಪ್ರವೇಶ ಮಾಡಿ ಇವುಗಳ ವಾಸಸ್ಥಾನವಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಮುಕ್ತ ಮಾಡಬೇಕೆಂದು ಪಣತೊಟ್ಟಿದ್ದಾರೆ ಆದರೆ ತಾಲ್ಲೂಕು ಕಛೇರಿಯ ಸುತ್ತಲೂ ಬರೀ ಪ್ಲಾಸ್ಟಿಕ್ ನಿಂದಲೇ ಕೂಡಿ ಅನೈರ್ಮಲ್ಯ ಸೃಷ್ಟಿಯಾಗಿದೆ.
ಸಾರ್ವಜನಿಕರಿಗೆ ಶಿಸ್ತಿನ ಬಗ್ಗೆ ತಿಳಿಸುವಂತಹ ಆಡಳಿತವೇ ಅಶಿಸ್ತಿನಿಂದ ಕೂಡಿದೆ.
ಬೇಸಿಗೆ ಹಿನ್ನಲೆಯಾದರೂ ಸಹ ಸಾರ್ವಜನಿಕರಿಗೆ ಕುಡಿಯುವ ನೀರುನ್ನು ಪೂರೈಸುವಂತಹ ಕೆಲಸ ಮಾಡಿಲ್ಲ. ಎಷ್ಟೋ ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳ ಮೊರೆಹೋಗಿದ್ದಾರೆ
ಕಾಟಾಚಾರಕ್ಕೆ ಇಲ್ಲಿನ ಆಡಳಿತ ಕಾರ್ಯ ನಿರ್ವಹಿಸುತ್ತದೆ ಎಂದರೆ ತಪ್ಪಾಗಲಾರದು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ದೂರಿದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…