ಯಶಸ್ವಿನಿ ಯೋಜನೆ’ ನೋಂದಣಿ ಮತ್ತೆ ಗಡುವು ಮಾ.31 ರವರೆಗೆ ವಿಸ್ತರಣೆ.!

ಬೆಂಗಳೂರು.01.ಫೇ.25: ರಾಜ್ಯ ಸರ್ಕಾರ ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ ನೋಂದಣಿ/ನವೀಕರಣ ಅವಧಿಯನ್ನು ದಿನಾಂಕ: 01-02-2025 ರಿಂದ ದಿನಾಂಕ: 31-03-2025 ರವರೆಗೆ ವಿಸ್ತರಿಸಲು ನಿಬಂಧಕರು ಕೋರಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಹಾಗೂ ಈ ಯೋಜನೆಯಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಸಹಕಾರ ಸಂಘಗಳ ಮತ್ತು ಸೇಲ್ಫ್ ಹೆಲ್ಪ್ ಗ್ರೂಪ್ ಸದಸ್ಯರ ಈ ಯೋಜನೆಯು ಲಾಭ ತಕೋಬಹುದು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

4 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago