ಯುಜಿಸಿ ಅರ್ಹತೆಯ ಅತಿಥಿ ಉಪನ್ಯಾಸಕರಿಗೆ ಮಾಸಿಕ ರೂ.50,000 ಸಂಭಾವನೆ

ಯುಜಿಸಿ (UGC) ಯಿಂದ ಸಂಭಾವನೆ ಎಂದರೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants Commission) ನೀಡುವ ಹಣಕಾಸಿನ ಸಹಾಯಧನ ಅಥವಾ ವಿದ್ಯಾರ್ಥಿವೇತನ ಎಂದರ್ಥ. ಯುಜಿಸಿ ಸಾಮಾನ್ಯವಾಗಿ ಸಂಶೋಧನಾ ವಿದ್ಯಾರ್ಥಿವೇತನ, ಅಧ್ಯಾಪಕರಿಗೆ ವೇತನ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಅನುದಾನ ಇತ್ಯಾದಿಗಳನ್ನು ನೀಡುತ್ತದೆ.


ಯುಜಿಸಿ ನೀಡುವ ಸಂಭಾವನೆಯು ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅವಲಂಬಿಸಿರುತ್ತದೆ.

ಉದಾಹರಣೆಗೆ:


ಸಂಶೋಧನಾ ವಿದ್ಯಾರ್ಥಿವೇತನ:
ಯುಜಿಸಿ ನೆಟ್ (UGC-NET) ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮತ್ತು ಪಿಎಚ್‌ಡಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿವೇತನ ನೀಡಲಾಗುತ್ತದೆ.


ಅಧ್ಯಾಪಕರ ವೇತನ:
ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅಧ್ಯಾಪಕರಿಗೆ ಯುಜಿಸಿ ನಿಗದಿಪಡಿಸಿದ ವೇತನ ಶ್ರೇಣಿಯ ಪ್ರಕಾರ ವೇತನ ನೀಡಲಾಗುತ್ತದೆ.


ಅನುದಾನ:
ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ, ಸಂಶೋಧನೆ ಮತ್ತು ಬೋಧನಾ ಚಟುವಟಿಕೆಗಳಿಗೆ ಯುಜಿಸಿ ಅನುದಾನ ನೀಡುತ್ತದೆ.


ಇತರ ಯೋಜನೆಗಳು:
ಯುಜಿಸಿಯು ವಿವಿಧ ಶೈಕ್ಷಣಿಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭಾವನೆ ನೀಡುತ್ತದೆ.
ಹೆಚ್ಚಿನ ಮಾಹಿತಿಗಾಗಿ, ನೀವು ಯುಜಿಸಿ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.

ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ನೆಟ್ ಸೆಟ್ ಹಾಗೂ ಪಿಹೆಚ್‌ಡಿ ಪದವಿ ಪಡೆದ ಹಾಗೂ 10 ವರ್ಷ ಕಾರ್ಯಾನುಭವ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್‌ ನ್ಯೂಸ್‌ ಅನ್ನು ಬೆಂಗಳೂರು ವಿವಿ ನೀಡಿದೆ. ವೇತನಕ್ಕೆ ಸಂಬಂಧಿತ ಸಿಹಿ ಸುದ್ದಿ ಇದಾಗಿದೆ. ನೀವು ಸಹ ಅತಿಥಿ ಉಪನ್ಯಾಸಕರ ಹುದ್ದೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿದ್ದರೆ ಈ ಮಾಹಿತಿ ತಪ್ಪದೇ ಓದಿಕೊಳ್ಳಿ.

ಅತಿಥಿ ಉಪನ್ಯಾಸಕ ಅಂದ್ರೆ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಶಾಶ್ವತ ಹುದ್ದೆ ಇಲ್ಲದ, ಆದರೆ ಅತಿಥಿಯಾಗಿ ಬಂದು ಪಾಠ ಮಾಡುವ ಉಪನ್ಯಾಸಕರು. ಅವರು ತಾತ್ಕಾಲಿಕವಾಗಿ ನೇಮಕಗೊಂಡಿರುತ್ತಾರೆ ಮತ್ತು ಅವರಿಗೆ ನಿಯಮಿತ ವೇತನ ನೀಡಲಾಗುತ್ತದೆ.


ಅತಿಥಿ ಉಪನ್ಯಾಸಕರು ಸಾಮಾನ್ಯವಾಗಿ ಈ ಕೆಳಗಿನ ಕೆಲಸಗಳನ್ನು ಮಾಡುತ್ತಾರೆ: ತರಗತಿಗಳಿಗೆ ಹಾಜರಾಗಿ ಪಾಠ ಮಾಡುತ್ತಾರೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ, ಪರೀಕ್ಷೆಗಳನ್ನು ನಡೆಸುತ್ತಾರೆ ಮತ್ತು ಮೌಲ್ಯಮಾಪನ ಮಾಡುತ್ತಾರೆ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ.


ಅತಿಥಿ ಉಪನ್ಯಾಸಕರ ನೇಮಕಾತಿ ಮತ್ತು ವೇತನವು ವಿಶ್ವವಿದ್ಯಾಲಯ ಅಥವಾ ಕಾಲೇಜಿನ ನಿಯಮಗಳನ್ನು ಅವಲಂಬಿಸಿರುತ್ತದೆ. ಕೆಲವು ಕಡೆ ಅತಿಥಿ ಉಪನ್ಯಾಸಕರಿಗೆ ಮಾಸಿಕ ವೇತನ ನೀಡಿದರೆ, ಇನ್ನು ಕೆಲವು ಕಡೆ ಗಂಟೆಯ ಆಧಾರದಲ್ಲಿ ವೇತನ ನೀಡಲಾಗುತ್ತದೆ.


ಉದಾಹರಣೆಗೆ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಅರ್ಹತೆಯ ಅತಿಥಿ ಉಪನ್ಯಾಸಕರಿಗೆ 50,000 ರೂ. ವರೆಗೆ ಮಾಸಿಕ ಸಂಭಾವನೆ ನೀಡಲಾಗುತ್ತದೆ.

ಪಿಹೆಚ್‌ಡಿ ಅರ್ಹರಿಗೆ Rs.50,000 ಮಾಸಿಕ ಸಂಭಾವನೆ.
ಬೆಂವಿವಿ ಸಿಂಡಿಕೇಟ್ ಸಭೆ ನಿರ್ಣಯ.
ಸಮಿತಿ ಮಾರ್ಗಸೂಚಿಗೆ ಅನುಮೋದನೆ.

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಂಬಳ ಎಷ್ಟು ಗೊತ್ತೇ?


ಕರ್ನಾಟಕ ರಾಜ್ಯದ ಡಿಗ್ರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಮಾಸಿಕವಾಗಿ ನೀಡುವ ಗೌರವಧನ ಎಷ್ಟು ಎಂದು ಈ ಕೆಳಗಿನಂತೆ ಅನುಭವ, ಅರ್ಹತೆಯ ಆಧಾರದಲ್ಲಿ ನೀಡಲಾಗಿದೆ. ಈ ಹುದ್ದೆಯ ಆಕಾಂಕ್ಷಿಗಳು ತಪ್ಪದೇ ಓದಿಕೊಳ್ಳಿ.

ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಮತ್ತು 10 ವರ್ಷಗಳ ಸೇವಾ ಅನುಭವ ಹೊಂದಿರುವವರಿಗೆ ಗರಿಷ್ಠ ರೂ.40,000 ಸಂಭಾವನೆಯನ್ನು ಈಗಾಗಲೇ ನೀಡುತ್ತಿದೆ. ಈಗ ಅದಕ್ಕಿಂತ ರೂ.10,000 ಹೆಚ್ಚು ಸಂಭಾವನೆಯನ್ನು ಬೆಂಗಳೂರು ವಿಶ್ವವಿದ್ಯಾಲಯ ನೀಡುತ್ತಿರುವುದು ಅತಿಥಿ ಉಪನ್ಯಾಸಕರಿಗೆ ಖುಷಿ ತಂದಿದೆ.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಆಯ್ಕೆ ಪ್ರಕ್ರಿಯೆ ನಡೆಸಲಿದೆ. ಆದರೆ, ಇಲ್ಲಿ ಸೇವಾ ಹಿರಿತನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಲ್ಲಿಯೇ ಮುಂದುವರಿಸುವ ನಿರ್ಣಯವು ಅತಿಥಿ ಉಪನ್ಯಾಸಕರಿಗೆ ವರದಾನವಾಗಿದೆ. ಆದರೆ, ಅಭ್ಯರ್ಥಿಗಳ ಸೇವಾ ಕಾರ್ಯಪ್ರವೃತ್ತತೆ, ಹಿರಿತನ, ಪ್ರಬಂಧಗಳ ಮಂಡನೆ
ಸೇರಿ ಇನ್ನಿತರ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಗಣಿಸಲಾಗುತ್ತದೆ ಎಂದು ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಲಾಗಿದೆ.

ಯಾವೆಲ್ಲ ಮಾರ್ಗಸೂಚಿಗೆ ಅನುಮೋದನೆ ನೀಡಲಾಗಿದೆ?


ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಅಧ್ಯಯನ ವಿಭಾಗಗಳಲ್ಲಿ ಬೋಧನಾ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯುವ ಸಂಬಂಧ ಮೌಲ್ಯಮಾಪನ ಕುಲಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯು ಮಾರ್ಗಸೂಚಿಗಳನ್ನು ಸಿದ್ಧಪಡಿಸಿತ್ತು. ಕಾರ್ಯಸೂಚಿಗೆ ಸಿಂಡಿಕೇಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.


ವಿಶ್ವವಿದ್ಯಾಲಯವು ಎ++ ಶ್ರೇಣಿ ಹಾಗೂ ವಿಶ್ವವಿದ್ಯಾಲಯದ ಘನತೆ ಹೆಚ್ಚಿಸುವಲ್ಲಿ ಅತಿಥಿ ಉಪನ್ಯಾಸಕರ ಪಾತ್ರವು ಮುಖ್ಯ ಮತ್ತು ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಅದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ನೆಟ್, ಸ್ಲೆಟ್ ಮತ್ತು ಪಿಎಚ್.ಡಿ ಅರ್ಹತೆಯೊಂದಿಗೆ 10 ವರ್ಷ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಕಕರಿಗೆ 11 ತಿಂಗಳ ವೇತನ ನೀಡಬೇಕು.

10 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಯಾವುದೇ ಸಂದರ್ಶನವಿಲ್ಲದೆ ಮುಂದುವರಿಸಬೇಕು. ಸಂದರ್ಶನ ನಡೆಸುವುದಾದರೆ ಯುಜಿಸಿ ನಿಯಮಗಳ ಅನುಸಾರ ವೇತನ ಕೊಡಬೇಕು. ಸಾಮಾಜಿಕ ನ್ಯಾಯ ದೃಷ್ಟಿಯಿಂದ ಉನ್ನತ ಸ್ಥಾನ ಕಲ್ಪಿಸಿಕೊಡಬೇಕು. ಅವರ ಕುಟುಂಬಗಳಿಗೆ ಸಾಂಸ್ಥಿಕ ಬದ್ಧತೆ ಒದಗಿಸಬೇಕು ಎಂಬ ಚರ್ಚೆಗಳು ನಡೆದಿವೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago