ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆಗೆ ಬ್ರೇಕ್.!

ಬೆಂಗಳೂರು: 22.ಜನವರಿ.25 :- ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತ್ಯಂತ ಕಡಿಮೆ ಗೌರವ ಧನಕ್ಕೆ ಎರಡು ದಶಕಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ.



ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024-25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆ ಗಳನ್ನೇ ಅತಿಥಿ ಉಪನ್ಯಾಸಕರ ಆಯ್ಕೆಗೂ ಅನ್ವಯಿಸಬೇಕು ಎಂದು ಹೈಕೋರ್ಟ್‌ ಕಳೆದ ಸೆಪ್ಟೆಂಬರ್‌ನಲ್ಲಿ ತೀರ್ಪು ಪ್ರಕಟಿಸಿತ್ತು.

ಹಾಗಾಗಿ, ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007-08ಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್‌ ಆದವರಿಗೂ ಅವಕಾಶ ನೀಡಲಾಗಿತ್ತು. 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್‌ ವಿದ್ಯಾರ್ಹತೆ ಪಡೆದಿದ್ದವರು ಅರ್ಜಿ ಸಲ್ಲಿಸಿ, ನೇಮಕಾತಿ ಆದೇಶವನ್ನೂ ಪಡೆದಿದ್ದರು.

ಆಗ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದವರು ಈಗ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ, 2009ಕ್ಕೂ ಮೊದಲು ಪಡೆದಿದ್ದ ಎಂ.ಫಿಲ್‌ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಕಾಲೇಜು ಶಿಕ್ಷಣ ಇಲಾಖೆ ನಿರಾಕರಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್‌ಇಟಿ ಇಲ್ಲವೇ ಕೆ-ಸೆಟ್‌ ತೇರ್ಗಡೆಯಾಗಿರಬೇಕು, ಪಿಎಚ್‌.ಡಿ ಪಡೆದಿರಬೇಕು ಎಂದು ಕೆಲ ವರ್ಷಗಳ ಹಿಂದೆಯೇ ಯುಜಿಸಿ ನಿಯಮ ರೂಪಿಸಿತ್ತು. ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲೂ ಇಂತಹ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿತ್ತು.

ಉನ್ನತ ಶಿಕ್ಷಣ ಇಲಾಖೆ ಕೆಲವು ವರ್ಷಗಳ ಹಿಂದೆಯೇ ರಾಜ್ಯದಲ್ಲೂ ಇದೇ ಮಾನದಂಡ ನಿಗದಿ ಮಾಡಿತ್ತು. ಆದರೆ, ಸರ್ಕಾರಕ್ಕೆ ಮನವಿ ಮಾಡಿದ್ದ ಅತಿಥಿ ಉಪನ್ಯಾಸಕರ ಸಂಘಟನೆಗಳು, ‘ದಶಕಗಳಿಂದ ಕೆಲಸ ಮಾಡುತ್ತಿರುವ ಶೇ 50ರಷ್ಟು ಅತಿಥಿ ಉಪನ್ಯಾಸಕರು ಸ್ನಾತಕೋತ್ತರ ಪದವಿಯನ್ನಷ್ಟೇ ಪಡೆದಿದ್ದಾರೆ.

ಕಡಿಮೆ ಗೌರವಧನ ಪಡೆದು ಬೋಧನಾ ಅವಧಿ ನಿರ್ವಹಿಸುತ್ತಿರುವುದರಿಂದ, ಯುಜಿಸಿ ನಿಯಮಗಳನ್ನು ಅನ್ವಯಿಸಬಾರದು’ ಎಂದು ಕೋರಿದ್ದವು.

ಮಾನವೀಯ ದೃಷ್ಟಿಯಿಂದ ಸರ್ಕಾರ ಅಂಥವರಿಗೆ ಮೂರು ವರ್ಷಗಳ ಒಳಗೆ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದುವಂತೆ ಅವಕಾಶ ನೀಡಿ, ಅವರನ್ನು ಸೇವೆಯಲ್ಲಿ ಮುಂದುವರಿಸಿತ್ತು. ಈ ಅವಧಿ ಇದೇ ಜನವರಿ 13ಕ್ಕೆ ಮುಕ್ತಾಯವಾಗುತ್ತಿದೆ. 

ಕೋರ್ಟ್‌ ತೀರ್ಪಿನಂತೆ 2, 4 ಹಾಗೂ 6ನೇ ಸೆಮಿಸ್ಟರ್‌ ಅವಧಿಯ ಬೋಧನೆಗೆ ಅವರನ್ನು ಕೈಬಿಟ್ಟು ಯುಜಿಸಿ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

‘ನಾವು ಕೆಲಸಕ್ಕೆ ಸೇರಿದ್ದು 2004-05ರಲ್ಲಿ. ಆಗ ಈ ಯಾವ ನಿಯಮಗಳೂ ಇರಲಿಲ್ಲ. ತಿಂಗಳಿಗೆ ₹1,200 ಪಡೆಯುತ್ತಿದ್ದ ನಾವು ಕಳೆದ ಎರಡು ವರ್ಷಗಳಿಂದ ವಿದ್ಯಾರ್ಹತೆ, ಅನುಭವದ ಆಧಾರದಲ್ಲಿ ₹31 ಸಾವಿರದಿಂದ ₹40 ಸಾವಿರದವರೆಗೂ ಗೌರವಯುತವಾದ ಗೌರವ ಸಂಭಾವನೆ ಪಡೆಯುತ್ತಿದ್ದೇವೆ.

ಸಂಭಾವನೆ ಹೆಚ್ಚಳದ ನೆಪದಲ್ಲಿ ಕೆಲಸದ ಅವಧಿ ಹೆಚ್ಚಿಸಿದ ಪರಿಣಾಮ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 2022-23ನೇ ಸಾಲಿನಲ್ಲಿ ಕೆಲಸ ಕಳೆದುಕೊಂಡಿದ್ದರು.

ಈಗ ಯುಜಿಸಿ ವಿದ್ಯಾರ್ಹತೆಯ ತೂಗುಗತ್ತಿಗೆ ಸಿಲುಕಿ, ಮತ್ತೆ ಐದು ಸಾವಿರ ಜನರು ಮನೆ ಸೇರುವಂತಾಗಿದೆ’ ಎನ್ನುತ್ತಾರೆ ಅತಿಥಿ ಉಪನ್ಯಾಸಕಿ ಶುಭ ಬಣಕಾರ್.

ಬಹುತೇಕರು 2003ರಿಂದಲೂ ಅತಿಥಿ ಉಪನ್ಯಾಸಕರಾಗಿದ್ದಾರೆ. ಕೆಲವರು ನಿವೃತ್ತಿಯ ಹತ್ತಿರ ಇದ್ದಾರೆ.ಸರ್ಕಾರ ಮಾನವೀಯ ನೆಲಗಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಹನುಮಂತಗೌಡ ಕಲ್ಮನಿ, ಅಧ್ಯಕ್ಷ, ರಾಜ್ಯ ಅತಿಥಿ ಉಪನ್ಯಾಸಕರ ಸಂಘಸೇವಾ ಭದ್ರತೆಗೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು.

ವಿದ್ಯಾರ್ಹತೆ ನೆಪದಲ್ಲಿ ಅನ್ಯಾಯ ಮಾಡಬಾರದು ಎಚ್.ಸೋಮಶೇಖರ ಶಿಮೊಗ್ಗಿ, ಅಧ್ಯಕ್ಷ, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ. ಸೆಪ್ಟೆಂಬರ್‌ ಆದೇಶಕ್ಕೆ ತಡೆ ಸಿಗದ ಕಾರಣ ಯುಜಿಸಿ ಅರ್ಹತೆ ಇರುವವರಿಗೆ ಅವಕಾಶ ನೀಡುತ್ತಿದ್ದೇವೆ ಎನ್‌. ಮಂಜುಶ್ರೀ, ಆಯುಕ್ತೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007-08ಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್‌ ಆದವರಿಗೂ ಅವಕಾಶ ನೀಡಲಾಗಿತ್ತು. 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್‌ ವಿದ್ಯಾರ್ಹತೆ ಪಡೆದಿದ್ದವರು ಅರ್ಜಿ ಸಲ್ಲಿಸಿ, ನೇಮಕಾತಿ ಆದೇಶವನ್ನೂ ಪಡೆದಿದ್ದರು.

ಆಗ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದವರು ಈಗ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ, 2009ಕ್ಕೂ ಮೊದಲು ಪಡೆದಿದ್ದ ಎಂ.ಫಿಲ್‌ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಕಾಲೇಜು ಶಿಕ್ಷಣ ಇಲಾಖೆ ನಿರಾಕರಿಸಿದೆ.ಎಂ.ಫಿಲ್‌ ಪರಿಗಣನೆಗೆ ನಕಾರ

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago