ಬೆಂಗಳೂರು.20.ಮಾರ್ಚ.25:- ಕರ್ಣಾಟಕ ರಾಜ್ಯದಲ್ಲಿ ತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಯುಜಿಸಿಇಟಿ-25 ಪರೀಕ್ಷೆ ನಡೆಸಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದು, ರಾಜ್ಯದ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಇರುವ ದೋಷಗಳನ್ನು ಸರಿಪಡಿಸಿಕೊಳ್ಳಲು ಸಿಇಟಿ ಪರೀಕ್ಷೆ ನಂತರವೂ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಯುಜಿ ಸಿಇಟಿ ಪರೀಕ್ಷೆ ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ. ಹೊರನಾಡು-ಗಡಿನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಇದಕ್ಕೆ ಸದ್ಯದಲ್ಲೇ ಪ್ರವೇಶ ಪತ್ರ ಡೌನ್ಲೋಡ್ಗೆ ಅವಕಾಶ ನೀಡಲಾಗುವುದು. ಈ ಪರೀಕ್ಷೆ ಬಳಿಕವೂ ಅರ್ಜಿಯಲ್ಲಿನ ದೋಷ ಸರಿಪಡಿಸಲು ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪ್ರಸಕ್ತ ಸಾಲಿಗೆ ಒಟ್ಟು 3,64,778 ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 3,44,989 ಮಂದಿ ಶುಲ್ಕ ಪಾವತಿಸಿದ್ದಾರೆ. ಈ ಪೈಕಿ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ (sats) ವ್ಯವಸ್ಥೆ ಮೂಲಕವೇ 1.36 ಲಕ್ಷ ಅಭ್ಯರ್ಥಿಗಳ ದಾಖಲೆಗಳು ಆನ್ಲೈನ್ನಲ್ಲಿ ಪರಿಶೀಲನೆಗೆ ಒಳಗಾಗಿವೆ. ಹಾಗೆಯೇ 1.64 ಲಕ್ಷ ಮಂದಿ, ಕಾಲೇಜುಗಳಲ್ಲಿ ತಮ್ಮ ದಾಖಲೆ ಪರಿಶೀಲನೆ ಮಾಡಿಸಿಕೊಂಡು ಅರ್ಹತೆ ಪಡೆದಿದ್ದಾರೆ.
ಇನ್ನೂ ಸುಮಾರು 44.200 ಸಾವಿರ ಅಭ್ಯರ್ಥಿಗಳು ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕಿದ್ದು, ಅವರಲ್ಲಿ ಯಾರ ಕ್ಲೇಮ್ ಚೀಟಿಯಲ್ಲಿ ಪರಿಶೀಲನೆ ಆಗಿಲ್ಲ (Not Verified) ಎಂದು ನಮೂದಾಗಿರುತ್ತದೊ ಅಂತಹವರು ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಪರಿಶೀಲನೆ ಮಾಡಿಸಿಕೊಳ್ಳಬಹುದು ಎಂದು ಸೂಚಿಸಿದ್ದಾರೆ.