ದಾವಣಗೆರೆ.29.ಜನವರಿ.25: ಇಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್.ರಾಜಶೇಖರ ಅವರು ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಹೊಸ ನಿಯಮಗಳ ಕರಡು ಉನ್ನತ ಶಿಕ್ಷಣಕ್ಕೆ ಮಾರಕವಾಗಿದೆ.
ಇಂದು ಶಿಕ್ಷಣವನ್ನು ಜಾಗತಿಕ ಸರಕಾಗಿ ರೂಪಿಸುವ ಹುನ್ನಾರವಾಗಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್.ರಾಜಶೇಖರ ಆರೋಪಿಸಿದರು.
ಯುಜಿಸಿ’ಉನ್ನತ ಶಿಕ್ಷಣದಲ್ಲಿ ಬದಲಾವಣೆ ತರುವ ಉದ್ದೇಶದಿಂದ ರೂಪಿಸಿದ ಕರಡಿನ ಬಗ್ಗೆ ಜನರು ಜಾಗೃತರಾಗುವ ಅಗತ್ಯವಿದೆ. ಸಾರ್ವಜನಿಕ ಚರ್ಚೆಯಲ್ಲಿ ಪಾಲ್ಗೊಂಡು ಉನ್ನತ ಶಿಕ್ಷಣವನ್ನು ಉಳಿಸಬೇಕಿದೆ. ಇಲ್ಲವಾದರೆ ವಿಶ್ವವಿದ್ಯಾಲಯಗಳು ಉದ್ಯಮಗಳಾಗಿ ಪರಿವರ್ತನೆ ಹೊಂದುವ ಅಪಾಯವಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ವಿಶ್ವವಿದ್ಯಾಲಯಗಳ ಕಲ್ಪನೆ ಹಾಗೂ ಉದ್ದೇಶಕ್ಕೆ ಕರಡು ವಿರುದ್ಧವಾಗಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಕೋಮುವಾದದಿಂದ ನಲುಗಿದ ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಸಂಪೂರ್ಣ ನಶಿಸಿ ಹೋಗಲಿದೆ.
ಆಡಳಿತಾತ್ಮಕ ಕೇಂದ್ರೀಕರಣವು ಸಂಶೋಧನೆ, ಶೈಕ್ಷಣಿಕ ಪ್ರಗತಿಗೆ ಅಡ್ಡಿಯುಂಟು ಮಾಡಲಿದೆ. ಆಡಳಿತ ಪಕ್ಷಗಳ ಸಿದ್ಧಾಂತವನ್ನು ಪಠ್ಯದಲ್ಲಿ ತುರುಕುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.
‘ಕುಲಪತಿ ಹಾಗೂ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಮಾಡಿರುವ ಬದಲಾವಣೆಗಳು ಅಪಾಯಕಾರಿಯಾಗಿವೆ. ಪ್ರಜಾಸತ್ತಾತ್ಮಕ ಶಿಕ್ಷಣದ ಮೂಲ ಅಡಿಪಾಯವನ್ನೇ ಅಲುಗಾಡಿಸುವಂತಿವೆ. ಕುಲಪತಿ ನೇಮಕದ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಸ್ತಕ್ಷೇಪದಿಂದ ವಿಶ್ವವಿದ್ಯಾಲಯಗಳು ಮುಕ್ತವಾಗಬೇಕಿದೆ’ ಎಂದು ಹೇಳಿದರು.
‘ಯುಜಿಸಿ ಕರಡು ನಿಯಮಗಳ ಕುರಿತು ಚರ್ಚಿಸಲು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಫೆ.1ರಂದು ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದ್ದು, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ವಿಶ್ರಾಂತ ಕುಲಪತಿಗಳಾದ ಪ್ರೊ.ಮಲ್ಲಿಕಾ ಘಂಟಿ, ಪ್ರೊ.ಎ.ಎಚ್.ರಾಜಾಸಾಬ್, ಪ್ರೊ.ಟಿ.ಡಿ.ಕೆಂಪರಾಜು ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.
ಸಮಿತಿಯ ಜಿಲ್ಲಾ ಸಂಘಟನಕಾರ ತಿಪ್ಪೇಸ್ವಾಮಿ, ಉಪನ್ಯಾಸಕರಾದ ಹೇಮಾವತಿ, ಸುಮಾ ವಿ.ಮಠದ್ ಹಾಜರಿದ್ದರು.
ಅನುರಾಧಾ, ನಿವೃತ್ತ ಪ್ರಾಧ್ಯಾಪಕಿವಿಶ್ವವಿದ್ಯಾಲಯಗಳು ವೈಚಾರಿಕತೆ, ಸಂಶೋಧನೆ ಆಧಾರದ ಮೇರೆಗೆ ಮುನ್ನಡೆಯುತ್ತಿದ್ದವು.
ಯುಜಿಸಿ ಹೊಸ ಕರಡು ಸಂವಿಧಾನದ ಆಶಯಕ್ಕೆ ಧಕ್ಕೆ ತರುವಂತಿದೆದಾದಾಪೀರ್ ನವಿಲೇಹಾಳ್, ನಿವೃತ್ತ ಪ್ರಾಧ್ಯಾಪಕಯುಜಿಸಿಯ ಹೊಸ ಕರಡು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣ ಖಾಸಗಿ ಹಿಡಿತಕ್ಕೆ ಸಿಲುಕಿದರೆ ಗ್ರಾಮೀಣ ಪ್ರತಿಭೆಗಳಿಗೆ ತೊಂದರೆ ಆಗಲಿದೆ
ಯುಜಿಸಿ ಕರಡು ನಿಯಮಗಳ ಕುರಿತು ಚರ್ಚಿಸಲು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಫೆ.1ರಂದು ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದ್ದು, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಯುಜಿಸಿ ಹೊಸ ನಿಯಮಾವಳಿಗೆ ಬಹಳಷ್ಟು ರಾಜ್ಯ ಸರಕಾರ ವಿರೋಧ ವ್ಯಕ್ತಪಡಿಸಿದರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…