Categories: ಶಿಕ್ಷಣ

ಯುಜಿಸಿ ಕರಡು ನಿಯಮ ತಿರಸ್ಕರಿಸಲು ರಾಜ್ಯ ಆಗ್ರಹ

ಬೆoಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೊಸ 2025 ಕರಡು ನಿಯಮಗಳು ಸಂವಿಧಾನದ ವಿರುದ್ಧವಾಗಿದೆ . ರಾಜಕೀಯ ಪ್ರೇರಿತವಾಗಿದ್ದು ಇವುಗಳನ್ನು ಸಾರಾಸಗಟು ತಿರಸ್ಕರಿಸುವಂತೆ ಜಾಗೃತ ನಾಗರಿಕರು ಕರ್ನಾಟಕ ವೇದಿಕೆ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.

2020ರಲ್ಲಿ ಅಸಾಂವಿಧಾನಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದಾಗ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿರೋಧ ಹಾಗೂ ಪ್ರತಿಭಟನೆಯ ಮೂಲಕ ಅದನ್ನು ಸಾರಾಸಗಟಾಗಿ ತಿರಸ್ಕರಿಸಲಾಗಿತ್ತು. ದೇಶದ ಬಹುತೇಕ ರಾಜ್ಯಗಳು ತಿರಸ್ಕರಿಸಿದ ಈ ಅಸಾಂವಿಧಾನಿಕ, ಅಪ್ರಜಾಸಾತ್ತಾತ್ಮಕ ಹಾಗೂ ಜನ ವಿರೋಧಿ ನೀತಿಯನ್ನೇ ಆಧರಿಸಿ ಯುಜಿಸಿ ತನ್ನ ಕರಡು ನಿಯಮಗಳು (2025)ನ್ನು ರೂಪಿಸಿ ಚರ್ಚೆಗೆ ಬಿಟ್ಟಿದೆ.

ಈಗಾಗಲೇ ದೇಶದ ಜನತೆ ತಿರಸ್ಕರಿಸಿದ ನೀತಿಯನ್ನು ಆಧರಿಸಿ ರೂಪಿಸಲಾಗಿರುವ ಈ ಕರಡು ನಿಯಮಗಳು ರಾಜ್ಯ ಸರ್ಕಾರಗಳ ಮೇಲೆ ಮತ್ತೊಮ್ಮೆ ತಿರಸ್ಕೃತ ರಾಷ್ಟ್ರೀಯ ನೀತಿಯನ್ನು ಹಿಂಬಾಗಿಲಿನಿಂದ ಹೇರುವ ದೊಡ್ಡ ರಾಜಕೀಯ ಹುನ್ನಾರವಾಗಿದೆ ಎಂದು ವೇದಿಕೆ ಹೇಳಿದೆ.

ಈ ನಿಯಮಗಳು ದೇಶದ ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಗುಣಮಟ್ಟ ಸುಧಾರಿಸುವ ಕುಂಟು ನೆಪದಲ್ಲಿ, ರಾಜ್ಯಗಳು ತಮ್ಮ ಸಂಪೂರ್ಣ ಧನ ಸಹಾಯದಿಂದ ನಡೆಸುತ್ತಿರುವ ಎಲ್ಲ ವಿಶ್ವವಿದ್ಯಾಲಯಗಳನ್ನು ಮತ್ತು ಸಂಯೋಜಿತ ಕಾಲೇಜುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವುದಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಪ್ರಜಾಸತ್ತಾತ್ಮಕ ಒಕ್ಕೂಟ ವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ತತ್ವವನ್ನು ಬುಡಮೇಲು ಮಾಡಿ ಕೇಂದ್ರೀಕೃತ ಸರ್ವಾಧಿಕಾರವನ್ನು ಜಾರಿಗೊಳಿಸಲು ರೂಪಗೊಂಡ ರಾಜಕೀಯ ಯೋಜನೆ ಇದಾಗಿದೆ.

ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿದಿದರೂ ರಾಜ್ಯಗಳ ಹಕ್ಕನ್ನು ಕಸಿದುಕೊಳ್ಳುವ, ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಮೊಟಕುಗೊಳಿಸುವ ಈ ತಿದ್ದುಪಡಿಯನ್ನು ತಿರಸ್ಕರಿಸಬೇಕು.

5 ರಂದು ಬೆಂಗಳೂರಿನಲ್ಲಿ ನಡೆಯುವ ದಕ್ಷಿಣ ಭಾರತದ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಈ ಕರಡು ನಿಯಮಗಳನ್ನು ಒಮ್ಮತದಿಂದ ಸಾರಾಸಗಟು ತಿರಸ್ಕರಿಸುವ ಒಂದು ಅಂಶದ ನಿರ್ಣಯ ಅಂಗೀಕರಿಸಬೇಕೆಂದು ವೇದಿಕೆಯ ಡಾ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್. ಜಿ.ಸಿದ್ದರಾಮಯ್ಯ ಮತ್ತಿತರರು ಆಗ್ರಹಿಸಿದ್ದಾರೆ.

prajaprabhat

Share
Published by
prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

2 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

4 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

4 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

10 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

11 hours ago