ಬೆoಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೊಸ 2025 ಕರಡು ನಿಯಮಗಳು ಸಂವಿಧಾನದ ವಿರುದ್ಧವಾಗಿದೆ . ರಾಜಕೀಯ ಪ್ರೇರಿತವಾಗಿದ್ದು ಇವುಗಳನ್ನು ಸಾರಾಸಗಟು ತಿರಸ್ಕರಿಸುವಂತೆ ಜಾಗೃತ ನಾಗರಿಕರು ಕರ್ನಾಟಕ ವೇದಿಕೆ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.
2020ರಲ್ಲಿ ಅಸಾಂವಿಧಾನಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದಾಗ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿರೋಧ ಹಾಗೂ ಪ್ರತಿಭಟನೆಯ ಮೂಲಕ ಅದನ್ನು ಸಾರಾಸಗಟಾಗಿ ತಿರಸ್ಕರಿಸಲಾಗಿತ್ತು. ದೇಶದ ಬಹುತೇಕ ರಾಜ್ಯಗಳು ತಿರಸ್ಕರಿಸಿದ ಈ ಅಸಾಂವಿಧಾನಿಕ, ಅಪ್ರಜಾಸಾತ್ತಾತ್ಮಕ ಹಾಗೂ ಜನ ವಿರೋಧಿ ನೀತಿಯನ್ನೇ ಆಧರಿಸಿ ಯುಜಿಸಿ ತನ್ನ ಕರಡು ನಿಯಮಗಳು (2025)ನ್ನು ರೂಪಿಸಿ ಚರ್ಚೆಗೆ ಬಿಟ್ಟಿದೆ.
ಈಗಾಗಲೇ ದೇಶದ ಜನತೆ ತಿರಸ್ಕರಿಸಿದ ನೀತಿಯನ್ನು ಆಧರಿಸಿ ರೂಪಿಸಲಾಗಿರುವ ಈ ಕರಡು ನಿಯಮಗಳು ರಾಜ್ಯ ಸರ್ಕಾರಗಳ ಮೇಲೆ ಮತ್ತೊಮ್ಮೆ ತಿರಸ್ಕೃತ ರಾಷ್ಟ್ರೀಯ ನೀತಿಯನ್ನು ಹಿಂಬಾಗಿಲಿನಿಂದ ಹೇರುವ ದೊಡ್ಡ ರಾಜಕೀಯ ಹುನ್ನಾರವಾಗಿದೆ ಎಂದು ವೇದಿಕೆ ಹೇಳಿದೆ.
ಈ ನಿಯಮಗಳು ದೇಶದ ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಗುಣಮಟ್ಟ ಸುಧಾರಿಸುವ ಕುಂಟು ನೆಪದಲ್ಲಿ, ರಾಜ್ಯಗಳು ತಮ್ಮ ಸಂಪೂರ್ಣ ಧನ ಸಹಾಯದಿಂದ ನಡೆಸುತ್ತಿರುವ ಎಲ್ಲ ವಿಶ್ವವಿದ್ಯಾಲಯಗಳನ್ನು ಮತ್ತು ಸಂಯೋಜಿತ ಕಾಲೇಜುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವುದಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.
ಪ್ರಜಾಸತ್ತಾತ್ಮಕ ಒಕ್ಕೂಟ ವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ತತ್ವವನ್ನು ಬುಡಮೇಲು ಮಾಡಿ ಕೇಂದ್ರೀಕೃತ ಸರ್ವಾಧಿಕಾರವನ್ನು ಜಾರಿಗೊಳಿಸಲು ರೂಪಗೊಂಡ ರಾಜಕೀಯ ಯೋಜನೆ ಇದಾಗಿದೆ.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿದಿದರೂ ರಾಜ್ಯಗಳ ಹಕ್ಕನ್ನು ಕಸಿದುಕೊಳ್ಳುವ, ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಮೊಟಕುಗೊಳಿಸುವ ಈ ತಿದ್ದುಪಡಿಯನ್ನು ತಿರಸ್ಕರಿಸಬೇಕು.
5 ರಂದು ಬೆಂಗಳೂರಿನಲ್ಲಿ ನಡೆಯುವ ದಕ್ಷಿಣ ಭಾರತದ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಈ ಕರಡು ನಿಯಮಗಳನ್ನು ಒಮ್ಮತದಿಂದ ಸಾರಾಸಗಟು ತಿರಸ್ಕರಿಸುವ ಒಂದು ಅಂಶದ ನಿರ್ಣಯ ಅಂಗೀಕರಿಸಬೇಕೆಂದು ವೇದಿಕೆಯ ಡಾ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್. ಜಿ.ಸಿದ್ದರಾಮಯ್ಯ ಮತ್ತಿತರರು ಆಗ್ರಹಿಸಿದ್ದಾರೆ.
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…