ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆಂಪರಾಜು ಆಗ್ರಹಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ವತಿಯಿಂದ ಆಯೋಜಿಸಿದ್ದ ‘ಯುಜಿಸಿಯ ವಿಶ್ವವಿದ್ಯಾಲಯಗಳ ಹೊಸ ಕರಡು ನಿಯಮಾವಳಿಗಳ ಸಾಧಕ – ಬಾಧಕ’ ಕುರಿತ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬದಲಾವಣೆಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ಇರಬೇಕು. ಶಿಕ್ಷಣ ವ್ಯವಸ್ಥೆ ಪರಾಮರ್ಶೆಯಾಗದಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ, ಅದು ಗುಣಮಟ್ಟವನ್ನು ತಗ್ಗಿಸಲು ಕಾರಣವಾಗಬಾರದು. ವಿದ್ಯಾರ್ಥಿ ಕೇಂದ್ರಿತ, ಸದೃಢ ಶಿಕ್ಷಣ ವ್ಯವಸ್ಥೆಗೆ ಪೂರಕವಾಗುವ ನೀತಿಗಳನ್ನು ಅನುಷ್ಠಾನಗೊಳಿಸಬೇಕು’ ಎಂದರು.

‘ಸಹಾಯಕ ಪ್ರಾಧ್ಯಾಪಕನಾಗಬೇಕಾದರೆ ನಿರ್ದಿಷ್ಟ ವಿಷಯದ ಜ್ಞಾನ ಮತ್ತು ಆಳವಾದ ಅಧ್ಯಯನ ಅವಶ್ಯ. ನಿಯಮಾವಳಿಯಲ್ಲಿ ಆ ಬಗ್ಗೆ ಸಡಿಲಿಕೆ ಇದೆ. ಅಲ್ಲದೆ, ಪ್ರಾಧ್ಯಾಪಕರ ಪಿಎಚ್‌.ಡಿ ಅಗತ್ಯವನ್ನೂ ತಗ್ಗಿಸಿದೆ. ಇದರಿಂದ ಪ್ರಾಧ್ಯಾಪಕರಲ್ಲಿ ಸಂಶೋಧನಾ ಪ್ರವೃತ್ತಿ, ಸುದೀರ್ಘ ಅಧ್ಯಯನ ಆಸಕ್ತಿ ಕುಂಠಿತವಾಗುತ್ತದೆ. ಪ್ರಾಧ್ಯಾಪಕರೇ ಸಂಶೋಧನಾ ಆಸಕ್ತಿ ರೂಢಿಸಿಕೊಳ್ಳದಿದ್ದರೆ ವಿದ್ಯಾರ್ಥಿಗಳಲ್ಲಿ ಸಂಶೋಧನಾ, ಅನ್ವೇಷಣಾ, ಅಧ್ಯಯನ ಪ್ರವೃತ್ತಿ ವೃದ್ದಿಸಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದರು.

‘ಉದ್ಯಮಿಗಳು, ಖಾಸಗಿ ವಲಯದವರು, ಶಿಕ್ಷಣ ವ್ಯವಸ್ಥೆಯ ಅರಿವಿಲ್ಲದವರು ಕುಲಪತಿಗಳಾಗಬಹುದು ಎಂಬ ಚಿಂತನೆ ಸಮಂಜಸವಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿದ ಮಾತ್ರಕ್ಕೆ ಪ್ರಾಧ್ಯಾಪಕರಿಗೆ ಎಚ್‌ಎ‌ಎಲ್, ಬಿಎಚ್‌ಇಎಲ್‌‌ ಸಂಸ್ಥೆಗಳಲ್ಲಿ ನಿರ್ದೇಶಕ ಹುದ್ದೆ ಪಡೆಯಲು ಸಾಧ್ಯವೇ? ಬೇರೆ ಕ್ಷೇತ್ರದಲ್ಲಿ ಇಲ್ಲದ ಸಡಿಲಿಕೆ, ಉನ್ನತ ಶಿಕ್ಷಣದಲ್ಲಿ ಮಾತ್ರ ಏಕೆ’ ಎಂದು ಪ್ರಶ್ನಿಸಿದರು.

ವಿಚಾರಗೋಷ್ಠಿಯಲ್ಲಿ ಕೋಶಾಧಿಕಾರಿ ಜಿ.ಕೃಷ್ಣಮೂರ್ತಿ, ವಿಜ್ಞಾನ ನಿಕಾಯದ ಡೀನ್‌ ಪ್ರೊ.ಅಶೋಕ್ ಡಿ.ಹಂಜಗಿ, ಶಿಕ್ಷಣ ನಿಕಾಯದ ಡೀನ್‌ ಪ್ರೊ. ಪಿ.ಸಿ.ಕೃಷ್ಣಮೂರ್ತಿ, ಪ್ರೊ.ಮುರುಳಿಧರ್ ಉಪಸ್ಥಿತರಿದ್ದರು.

prajaprabhat

Recent Posts

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

6 hours ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

6 hours ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

6 hours ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

6 hours ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

6 hours ago

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಸಂಸತ್ತು ಹಲವು ಬಾರಿ ಮುಂದೂಡಿಕೆ, 18 ರಂದು ಪುನರಾರಂಭ

ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…

6 hours ago