ಬೀದರ.90 ಏಪ್ರಿಲ್.25:- ಏಪ್ರಿಲ್.16 ಹಾಗೂ 17 ರಂದು ನಡೆಯಲಿರುವ ಯುಜಿಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) UGCET ಗಳನ್ನು ಸುವ್ಯವಸ್ಥಿತವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳಿರಲಿದ್ದು ಬೀದರ, ಬಸವಕಲ್ಯಾಣ, ಭಾಲ್ಕಿ ನಗರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.
ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸ್ಕಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಈ ಪರೀಕ್ಷೆಗಳು ನಡೆಯಲಿವೆ. ಕೆಇಎ ಆದೇಶಿಸಿರುವ ವಸ್ತ್ರ ಸಂಹಿತೆಯನ್ನು ಕಡ್ಡಾಯ ಪಾಲಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರ, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಕಾAತ ಶಹಾಬಾದಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…
ಹೊಸ ದೆಹಲಿ.10.ಜೂನ್.25:- ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದ ವಿವಿಧ ಹೂದೆಗಳಿಗಾಗಿ ಅರ್ಜಿಖಾಲಿ ಇರುವ 2,423 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ .…
ಔರಾದ.10.ಜೂನ್.25:- ಡಾ.ಸಿಂಧೆ ಭೀಮಸೇನ್ ರಾವ್ ಅವರು ಸೋಮವಾರ ರಾಜ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಔರಾದ ಮತ್ತು…
ಹೊಸ ದೆಹಲಿ.10.ಜೂನ್.25:- ನೀವು ಮನೆಯಲ್ಲಿ ಕುಳಿತುಕೊಂಡು ಆನ್ಲೈನ್ನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಿಂದ ಉಚಿತ ಕೋರ್ಸ್ ಮಾಡಬಹುದು.…
ಬೆಂಗಳೂರು.10.ಜೂನ್.25:- 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳ ಮಾಹಿತಿಯನ್ನು ದೃಡೀಕರಿಸಿ ಸಲ್ಲಿಸುವ…