ಯುವಕರು ಮಾದಕ ವಸ್ತು ಸೇವೆನೆಯಿಂದ ದೂರವಿರುವ ಸಂಕಲ್ಪ ಮಾಡಬೇಕು: ತಹಶೀಲ್ದಾರ ಮಲಶೇಟ್ಟಿ ಚಿದಿ

ಬೀದರ.05.ಮಾರ್ಚ.25:- ಯುವ ಪೀಳಿಗೆ ದೂಮಪಾನ ಮಧ್ಯಪಾನದಿಂದ ಅನೇಕ ಆರೋಗ್ಯ ಸಮಸ್ಯೆ ಎದುರಿಸುತ್ತಿದೆ. ಇಂದಿನ ಯುವಕರು ಕುಡಿತ, ಡ್ರಗ್ಸ್, ಗುಟಕಾ ಚಟಗಳಿಂದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ.


ನಶೆಯಲ್ಲಿ ಅಪರಾದ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರತಿಯೊಬ್ಬರು ಮಾದಕ ವಸ್ತು ಸೇವೆನೆಯಿಂದ ದೂರ ಉಳಿಯುವ ಸಂಕಲ್ಪ ಮಾಡಬೇಕು ಎಂದು ಔರಾದ ತಾಲ್ಲೂಕ ತಹಶೀಲ್ದಾರ ಮಲಶೇಟ್ಟಿ ಚಿದ್ರಿ ಹೇಳಿದರು.



ಅವರು ಮಂಗಳವಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಔರಾದ (ಬಾ) ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕೀರಣ ಉದ್ಘಾಟಿಸಿ ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಮುದೋಳ (ಬಿ) ವೈದ್ಯಧಿಕಾರಿ ಡಾ. ಅನಿಕುಮಾರ ಗಡ್ಡೆ, ಅವರು ಅತಿಥಿ ಉಪನ್ಯಾಸ ನೀಡಿ ಮಾತನಾಡಿ, ತಂಬಾಕು, ಗುಟ್ಕಾ, ಮಧ್ಯ ಸೇವನೆಯಿಂದ ಕ್ಯಾನ್ಸರ್, ಪಾರ್ಶವಾಯುವಂತಹ ಮಾರಕ ರೋಗಗಳು ಬರುತ್ತವೆ. 16 ರಿಂದ 23 ವರ್ಷದ ಒಳಗಿನ ಯುವಕರು ಮೊದಲಿಗೆ ಮೋಜಿಗಾಗಿ ತಂಬಾಕು, ಗುಟ್ಕಾ, ಹಾಗೂ ಮಧ್ಯಸೇವನೆ ಪ್ರರಂಭಿಸುತ್ತಾರೆ. ನಂತರ ದಿನಗಳಲ್ಲಿ ಅದು ಹವ್ಯಾಸವಾಗಿ ಬೆಳೆದು ನಾನಾ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ದೇಶದಲ್ಲಿ ಪ್ರತಿ ದಿನ ಮದ್ಯಪಾನ ಹಾಗೂ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ 2500 ಜನ ಸಾವನ್ನಪುತ್ತಿದ್ದಾರೆ. ರಾಜ್ಯದಲ್ಲಿ ಕೂಡ ಅನೇಕ ಯುವಜನತೆ ಮಾರಕ ರೋಗಗಳಿಂದ ಬಲಿಯಾಗುತ್ತಿದ್ದಾರೆ ಎಂದರು 

ಔರಾದ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, 15 ರಿಂದ 25 ವಯೋಮಾನದ ಇಂದಿನ ಯುವಕರು ಮದ್ಯಸೇವನೆ, ಗುಟ್ಕಾ ಮತ್ತಿತರ ನಶೆ ಏರಿಸುವ ವಸ್ತುಗಳಿಂದ ದೂರ ವೀರಬೇಕು.

ಪ್ರತಿಯೊಂದು ಮಾದಕವಸ್ತುಗಳು ಮೇಲೆ ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆದರು ಕೂಡ ಅದನ್ನು ಲೆಕ್ಕಿಸದೆ ದುಶ್ಟಚಟಗಳಿಗೆ ಬಲಿಯಾಗುತ್ತಿದ್ದಾರೆ. ಅನಕ್ಷರಸ್ತರಿಗಿಂತ ಅಕ್ಷರಸ್ಥರೆ ಎಲ್ಲಾ ತಿಳಿದು ಓದಿಕೊಂಡರು ಸಹ ಮಾದಕ ವ್ಯಸನಿಗಳಾಗುತ್ತಿದ್ದಾರೆ ಎಂದು ಕಳಕಳಿ ವ್ಯಕ್ತಪಡಿಸಿದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳಿ ಅವರು ಮಾತನಾಡಿ, ಸರ್ಕಾರದ ವತಿಯಿಂದ ಯುವಜನತೆಗಳಲ್ಲಿ ಜಾಗೃತಿ ಮೂಡಿಸಲು ಮದ್ಯಪಾನ ಸಂಯಮ ಮಂಡಳಿಯವರಿಂದ ಇಂತಹ ವಿಚಾರ ಸಂಕಿರಣ ಕಾರ್ಯಕ್ರಮಗಳನ್ನು ಏರ್ಪಡಿಸಿ ಜಾಗೃತಿ  ಮಾಡಿಸಲಾಗುತ್ತಿದೆ ಆದ್ದರಿಂದ ವಿದ್ಯಾರ್ಥಿಗಳು ಎಲ್ಲ ರಿತಿಯ ದುಷ್ಚಟಗಳಿಂದ ದೂರ ಇಂದು ಸ್ವಾಸ್ಥ್ಯ ಸಮಾಜ  ನಿರ್ಮಾಣ ಮಾಡಲು ಕೈಜೋಡಿಸಬೇಕೆಂದರು.



ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ನಾಗಭೂಷಣ ಮಠ ಅವರು ಮಾತನಾಡಿದರು,

ಕಾರ್ಯಕ್ರಮದಲ್ಲಿ ಶಿವಶಂಕರ ಟೋಕರೆ, ಔರಾದ ರೂರಲ್ ಐಟಿಐ ಕಾಲೇಜಿನ ಪ್ರಾಚಾರ್ಯ ರಾಜಕುಮಾರ ಮಾಳಗೆ, ಔರಾದ (ಬಾ) ಪಟ್ಟದೇವರು ಐಟಿಐ ಕಾಲೇಜಿನ ಪ್ರಾಚಾರ್ಯ ಸತೀಶ ಗಂದಿಗುಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ ಅಧ್ಯಕ್ಷ ಪಂಡರಿ ಆಡೆ, ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆ ಬೀದರನ ತರಬೇತಿ ಅಧಿಕಾರಿ ಬಾಬು ಪ್ರಭಾಜಿ, ಔರಾದ ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಯುಸುಫ ಮಿಯಾ, ವಾರ್ತಾ ಇಲಾಖೆಯ ವಿಜಯಕೃಷ್ಣ ಸೇರಿದಂತೆ ಕೈಗಾರಿಕಾ ತರಬೇತಿ ಸಂಸ್ಥೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago