ಯೂರಿಯಾ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ: ಜಂಟಿ ಕೃಷಿ ನಿರ್ದೇಶಕರುಕೊಪ್ಪಳ


ಕೊಪ್ಪಳ.24.ಜುಲೈ 25: ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜುಲೈವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 33,459 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 4,702 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನು ಲಭ್ಯವಿದೆ.


ಈ ವಾರ  National Fertilizers Limited (NFL), Coromandel International Limited (CIL)  ಹಾಗೂ  Kribhco Fertilizer Limited     ಕಡೆಯಿಂದ ಒಟ್ಟು 3,136.73 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಪೂರೈಕೆ ಮಾಡಲಾಗಿದೆ. ಈ ಪೂರೈಕೆಯಿಂದ ಕೊಪ್ಪಳ ತಾಲ್ಲೂಕಿಗೆ 629.03 ಟನ್, ಕುಷ್ಟಗಿ ತಾಲ್ಲೂಕಿಗೆ 269.95 ಟನ್, ಯಲಬುರ್ಗಾ ತಾಲ್ಲೂಕಿಗೆ 421.70 ಟನ್, ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಭಾಗಗಳಿಗೆ 1,816.05 ಟನ್ ರಸಗೊಬ್ಬರವನ್ನು ಪೂರೈಸಲಾಗಿದೆ. ಯೂರಿಯಾ ರಸಗೊಬ್ಬರದ ಪೂರೈಕೆ ಹಂತ ಹಂತವಾಗಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ 5,000 ಮೆಟ್ರಿಕ್ ಟನ್  SPIC, MFL    ಮತ್ತು  RCF     ಕಂಪನಿಗಳಿAದ ಇನ್ನೂ ಹೆಚ್ಚಿನ ಪೂರೈಕೆ ನಿರೀಕ್ಷಿಸಲಾಗಿದೆ.


ರೈತರು ಯಾವುದೇ ಆತಂಕಕ್ಕೊಳಗಾಗದೇ, ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆಯೂ ಸಾಧ್ಯ. ಅಲ್ಲದೇ, ರೈತರು ರಸಗೊಬ್ಬರ ಹಾಗೂ ಇತರೆ ಕೃಷಿ ಪರಿಕರಗಳನ್ನು ಖರೀದಿಸುವಾಗ ಮಾರಾಟಗಾರರು ಖರೀದಿ ಬಿಲ್ ನೀಡದೇ ಇರುವುದು ಅಥವಾ ಮೌಲ್ಯಕ್ಕಿಂತ ಹೆಚ್ಚು ದರದಲ್ಲಿ ಮಾರಾಟ ಮಾಡುವುದನ್ನು ಕಂಡುಬoದಲ್ಲಿ, ತಕ್ಷಣವೇ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ, ಕೊಪ್ಪಳ: 8277922143, ನಾಗರಾಜ ಕಾತರಕಿ, ಕುಷ್ಟಗಿ: 8277922109, ಪ್ರಮೋದ ತುಂಬಾಳ, ಯಲಬುರ್ಗಾ: 8277922107, ಸಂತೋಷ ಪಟ್ಟದಕಲ್, ಗಂಗಾವತಿ: 8277922106, ಸುನೀಲ್ ಕುಮಾರ ಎಂ. ಟಿ., (ಜಾರಿದಳ) ಕೊಪ್ಪಳ: 8277932117 ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

8 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago