ರಂಜಾನ್-ಹೋಳಿ ಹಬ್ಬ ಸೌಹಾರ್ದ ಸಭೆ:ಶಾಂತಿ ಸುವ್ಯವಸ್ಥೆ, ಸಹೋದರತ್ವದಿಂದ ಆಚರಿಸಲು ಕರೆ.!

ಬೀದರ.01.ಮಾರ್ಚ.25:- ಬೀದರ ಜಿಲ್ಲೆಯಾದ್ಯಂತ ರಂಜಾನ್ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಯುತವಾಗಿ ಸಹೋದರತ್ವ ಭಾವನೆಯಿಂದ ಕೋಮು ಸೌಹಾರ್ದತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಬಾರದಂತೆ ಆಚರಿಸುವಂತೆ ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ ಇಂದಿಲ್ಲಿ ಕರೆ ನೀಡಿದರು.


ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಈ ಕುರಿತು ವಿವಿಧ ಸಮುದಾಯಗಳ ಗಣ್ಯರ ನಾಯಕರ ಸಭೆಯನ್ನುದ್ದೇಶಿಸುತ್ತಾ ಅವರು ಮಾತನಾಡಿದರು.
ಹೋಳಿ ಹಬ್ಬದ ದಿನದಂದು ಮಧ್ಯಾಹ್ನ 12:30 ಗಂಟೆಯವರೆಗೆ ಎಲ್ಲರೂ ಬಣ್ಣದಾಟವನ್ನು ಮುಗಿಸಬೇಕು.

ಈ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗಳಿಗೆ ಬಣ್ಣದಿಂದ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ರಂಜಾನ್ ಹಬ್ಬದ ಪ್ರಯುಕ್ತ ಓಲ್ಡ್ ಸಿಟಿಯಲ್ಲಿ ವ್ಯಾಪಾರ ಮಾಡಲು ವ್ಯಾಪರಸ್ಥರಿಗೆ ಮೊದಲನೆ ಹತ್ತು ದಿನ ರಾತ್ರಿ 1 ಗಂಟೆಯವರೆಗೆ, ಎರಡನೇ ಹತ್ತು 10 ದಿನ ರಾತ್ರಿ 1 ಗಂಟೆಯವರೆಗೆ, ಮೂರನೆ ಹತ್ತು ದಿನ ಬೆಳಗ್ಗಿನವರೆಗೆ ಸಮಯವಕಾಶ ಕಲ್ಪಿಸಿ ವ್ಯಾಪರಸ್ಥರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.


ನಗರಸಭೆ ಅಧ್ಯಕ್ಷರಾದ ಎಂ.ಡಿ.ಗೌಸ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಕೂಡ ಹಿಂದು-ಮುಸ್ಲಿಂ ಬಾಂಧವರು ಪ್ರೀತಿ, ಭಾಂದವ್ಯದಿಂದ ಆಚರಿಸುತ್ತಾ ಬಂದಿದ್ದೇವೆ. ಯಾವುದೇ ರೀತಿ ಅಹಿತಕರ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದರು.


ಇದೇ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಸಮುದಾಯದ ಮುಖಂಡರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಸಭೆಯಲ್ಲಿ ನಗರಸಭೆ ಸದಸ್ಯರಾದ ಇರ್ಶಾದ ಪೈಲ್ವಾನ, ಅಬ್ದುಲ್ ಅಜೀಜ್ ಮುನ್ನಾ, ಡಾ.ಮಕಸೂದ ಚಂದಾ, ಶಾಹಿನ ಪವೇಜ್, ಎಂ.ಕೆ.ಬೇಗ, ನಂದಕಿಶೋರ ಶಮಾ, ಸೂರ್ಯಕಾಂತ ಶೆಟಕಾರ, ಮನೋಹರ ದಂಡೆ, ಡಿ.ವೈ.ಎಸ್.ಪಿ. ಶಿವನಗೌಡ ಪಾಟೀಲ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago