ರಕ್ತದಾನ ಮಾಡುವುದರಿಂದ ಮೂರು ಜನರ ಜೀವ ಕಾಪಾಡಬಹುದು-ಡಾ.ಇಂದ್ರಜಿತ ಶಾ


ಬೀದರ.20.ಜೂನ್.25:- ರಕ್ತದಾನವೇ ಶ್ರೇಷ್ಠದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್.ವಿ.ಇ.ಟಿ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಇಂದ್ರಜಿತ ಶಾ ಹೇಳಿದರು.


ಅವರು ಶುಕ್ರವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಸ್ಪತ್ರೆ ಬೀದರ, ಶ್ರೀ ವಈರಭದ್ರೇಶ್ವರ ಹೋಮಿಯೋಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹುಮನಾಬಾಧ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನರಲ್ಲಿ ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ತೊಂದರೆಯಾಗುತ್ತದೆಂದು ತಪ್ಪು ತಿಳುವಳಿಕೆ ಇದೆ. ಆದರೆ ರಕ್ತದಾನ ಮಾಡುವುದರಿಂದ ಆರೋಗ್ಯವನ್ನು ಉತ್ತಮರೀತಿಯಲ್ಲಿ ಕಾಪಾಡಬಹುದಾಗಿದೆಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅನೀಲಕುಮಾರ ಚಿಂತಾಮಣಿ ಮಾತನಾಡಿ, ಯುವಜನತೆಯು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಜೊತೆಗೆ ಎಲ್ಲರಿಗೂ ಅರಿವು ನೀಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಪ್ರೋತ್ಸಾಹಿಸಬೇಕೆಂದು ಹೇಳಿದರು.


ಹುಮನಾಬಾದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮುಜತಾಬ ಹುಸೈನರವರು ರಕ್ತದಾನ ಮಾಡುವಾಗ ಅನುಸರಿಸಬೇಕಾದ ಮಾರ್ಗಸೂಚಿಯ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಾದ ಫಾದರ ವಿಕ್ಟೋರಿಯಾರವರು ಎ+ ಗ್ರೂಪನವರಾಗಿದ್ದು (28 ಬಾರಿ), ಆಕಾಶ ತಂದೆ ಸಿದ್ರಾಮೇಶ್ವರರವರು ಎಬಿ+ ಗ್ರೂಪನವರಾಗಿದ್ದು (18 ಬಾರಿ), ಸಾತ್ವಿಕಾ, ಒ+ಗ್ರೂಪನವರಾಗಿದ್ದು (02 ಬಾರಿ), ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜಿನ ವಿದ್ಯಾರ್ಥಿಗಳಾದ ಆರಿಫ- ಎ+ಗ್ರೂಪನವರಾಗಿದ್ದು (04 ಬಾರಿ) ಮತ್ತು ಇಬ್ರಾಹಿಂ – ಬಿ+ಗ್ರೂಪನವರಾಗಿದ್ದು (04 ಬಾರಿ) ರಕ್ತದಾನ ಮಾಡಿರುವುದಕ್ಕಾಗಿ ಹಾಗೂ ಸ್ವಯಂ ಪ್ರೇರಿತವಾಗಿ ಮುಂದಾಳ್ವವನ್ನು ವಹಿಸಿ ರಕ್ತದಾನ ಶಿಬಿರಗಳನ್ನು ಆಯೋಜಿಸಿರುವ ಲಕ್ಷ್ಮಿಕಾಂತ ಹಿಂದೊಡ್ಡಿ, ಶಾಂತಕುಮಾರ ಆಕಾಶ ತಂದೆ ಸಿದ್ರಾಮೇಶ್ವರ ಆಯೋಜಕರಿಗೆ ಅಭಿನಂದನಾ ಪತ್ರವನ್ನು ನೀಡಿ, ಸನ್ಮಾನ ಮಾಡಲಾಯಿತ್ತು. ಶಿಬಿರದಲ್ಲಿ 50 ರಕ್ತದಾನಿಗಳು ರಕ್ತದಾನವನ್ನು ಮಾಡಿದರು.


ಕಾರ್ಯಕ್ರಮದಲ್ಲಿ ಎಸ್.ವಿ.ಇ.ಟಿ ಶ್ರೀ. ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಇಂದ್ರಜಿತ ಶಾರವರು ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ. ಅನೀಲಕುಮಾರ ಚಿಂತಾಮಣಿರವರು, ಹುಮನಾಬಾದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ನಾಗನಾಥ ಹುಲಸೂರೆ, ಹುಮನಾಬಾದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಮುಜತಾಬ ಹುಸೈನರವರು ಪಾಲ್ಗೊಂಡಿದರು.


ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿಯನ್ನು ಐಸಿಟಿಸಿ ಜಿಎಚ್ ಹುಮನಾಬಾದನ ಆಪ್ತ ಸಮಾಲೋಚಕರಾದ ಶ್ರೀಮತಿ. ಗೀತಾ ರೆಡ್ಡಿರವರು ಬೋಧಿಸಿದರು.


ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ನಾಗನಾಥ ಹುಲಸೂರೆ,  ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಸೂರ್ಯಕಾಂತ, ಬ್ಲಡ ಬ್ಯಾಂಕ ಕೇಂದ್ರದ ಸಿಬ್ಬಂದಿಯವರು, ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಉಪನ್ಯಾಸಕರು, ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಸಿಬ್ಬಂದಿಯವರು ಸೇರಿದಂತೆ ಇತರರು ಉಪಸ್ಥಿತರಿದ್ದರು. ನಿರೂಪಣೆಯನ್ನು ಡಾ. ಶ್ವೇತ ಮತ್ತು ವಂದರ್ನಾಪಣೆಯನ್ನು ಡಾ. ಭಾಗ್ಯಶ್ರೀ ನೇರವೇರಿಸಿದರು.

prajaprabhat

Recent Posts

ಎಪಿ: 25 ಸಾವಿರ ಬುಡಕಟ್ಟು ಮಕ್ಕಳು 108 ನಿಮಿಷಗಳಲ್ಲಿ 108 ಸೂರ್ಯ ನಮಸ್ಕಾರ ಮಾಡಿದ್ದಾರೆ.

ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…

6 hours ago

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…

6 hours ago

ನಕಲಿ ವೈದರಿಗೆ ದಂಡ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…

6 hours ago

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.21.ಜೂನ್.25:- ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಗುರುವಾರ…

6 hours ago

ಅನುಭವ ಮಂಟಪ 742 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ

ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ.…

6 hours ago

ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ…

6 hours ago