ಬೀದರ.14.ಫೆಬ್ರುವರಿ.25:-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 2025ನೇ ಸಾಲಿಗೆ ಓಡಾಡುವ ವಾಹನಗಳ ರಸ್ತೆ ಸಂಚಾರ ಗಣತಿಯನ್ನು ಇದೇ ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24ರ ಬೆಳಿಗ್ಗೆ.
ಈ ಗಣತಿಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ಸಾಂದ್ರತೆ, ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲತೆ ನಿರ್ಧರಿಸಲು, ರಸ್ತೆಗಳನ್ನು ಮೇಲ್ದರ್ಜೇಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
6 ಗಂಟೆಯವರೆಗೆ ಸತತವಾಗಿ 7 ದಿನಗಳ ಕಾಲ ನಡೆಯಲಿರುವುದರಿಂದ ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಈ ಗಣತಿ ಕಾರ್ಯಕ್ಕೆ ಸಹಕರಿಸಬೇಕೆಂದು ಬೀದರ ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.