ರಾಜ್ಯದಲ್ಲಿ ಇನ್ಮುಂದೆ `SARI’ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ:  ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.31.ಮೇ.25:- ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು.

ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In – First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

ಎಲ್ಲಾ SARI ಪಕರಣಗಳಿಗೆ ಕಡ್ಡಾಯವಾಗಿ ಕೋವಿಡ್-19 ರ ಪರೀಕ್ಷೆ ನಡೆಸುವುದು.
ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಕೋವಿಡ್-19 ರ ಪರೀಕ್ಷೆಗಳನ್ನು ನಡೆಸುವುದು.
ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಅಂತ ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago