ರಾಜ್ಯದಲ್ಲಿ ಕನ್ನಡ ಭಾಷಾ ಸ್ಪರ್ಧಾತ್ಮಕ ಪರೀಕ್ಷೆಗೆ ಕಡ್ಡಾಯ.!

ಬೆಂಗಳೂರು.21.ಫೆಬ್ರವರಿ25: ಕರ್ಣಾಟಕ ರಾಜ್ಯದಲ್ಲಿ ಕನ್ನಡ ಮಾಧ್ಯಮ ಹೊರತುಪಡಿಸಿದರೆ ಬೇರೇ ಮಾಧ್ಯಮದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಕನ್ನಡ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ರಾಜ್ಯದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆ :

ಕನ್ನಡ ಮಾಧ್ಯಮ ಮತ್ತು ಕನ್ನಡ ಪರೀಕ್ಷೆ ಪಾಸಾದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯವಿಲ್ಲ. ಕೆಲವೊಂದು ಅರ್ಹ ಅಭ್ಯರ್ಥಿಗಳಿಗೆ ಅಂದರೆ ತತ್ಸಮಾನ ಎಸ್.ಎಸ್.ಎಲ್.ಸಿ ಮತ್ತು ಅದರ ತತ್ಸಮಾನ ವಿದ್ಯಾರ್ಥಿಗಳ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸಿಸಿರುವ ಮತ್ತು ಸದರಿ ವಿದ್ಯಾಬ್ಯಾಸವನ್ನು ಕನ್ನಡ ಮಾಧ್ಯಮದಲ್ಲಿ ಮಾಡಿರುವ ಮತ್ತು ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಇತರ ಆಯ್ಕೆ ಪ್ರಾಧಿಕಾರಗಳು ನಡೆಸಿರುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯಥಿಗಳಿಗೆ ಸದರಿ ಪರೀಕ್ಷೆಯಿಂದ ವಿನಾಯಿತಿ ನೀಡಲು ಪ್ರಸ್ತಾಪಿಸಲಾಗಿದೆ ಎಂದು ಕಾನೂನು ಸಚಿವರಾದ ಎಚ್.ಕೆ ಪಾಟೀಲ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಚ್.ಕೆ ಪಾಟೀಲ ಅವರು, ಕರ್ನಾಟಕ ನಾಗರಿಕ ಸೇವಾ ನೇರ ನೇಮಕಾತಿ ಸಾಮಾನ್ಯ,3ನೇ ತಿದ್ದುಪಡಿ, ನಿಯಮಗಳು, 2025ನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ ಕಲಂ 3 ಮತ್ತು 8ರ ಅನುಸಾರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ, ತರುವಾಯ 15 ದಿನಗಳ ಒಳಗಾಗಿ ಅದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಆಕ್ಷೇಪಣೆ ಸಲಹೆಗಳನ್ನು ಆಹ್ವಾನಿಸಲು ಹಾಗೂ ಪ್ರಕಟಗೊಂಡ 15 ದಿನಗಳ ಒಳಗಾಗಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ,ಸಲಹೆಗಳು ಸ್ವೀಕೃತವಾಗದೇ ಇದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ,ಸಲಹೆಗಳು ಗುರುತರವಾಗಿರದೇ ಇದ್ದಲ್ಲಿ ಅಥವಾ ಆಕ್ಷೇಪಣೆ, ಸಲಹೆಗಳನ್ನು ಪರಿಗಣಿಸಿ “ಸದರಿ ಕರಡು ನಿಯಮಗಳಲ್ಲಿ” ಮಾಡಬಹುದಾದ ಮಾರ್ಪಾಡುಗಳು ಪ್ರಮುಖವಾದಂತಹವುಗಳಾಗದೇ ಇದ್ದಲ್ಲಿ ಪುನಃ ಸಚಿವ ಸಂಪುಟದ ಅನುಮೋದನೆಗಾಗಿ ಮಂಡಿಸದೇ ಸದರಿ ಕರಡು ನಿಯಮಗಳನ್ನು ಅಂತಿಮವಾಗಿ ಹೊರಡಿಸಲು ಸಚಿವ ಸಂಪುಟ ಅನುಮೋದಿಸಿದೆ.

KPSC ಎಡವಟ್ಟು: ಸಿಎಂ ಸಿದ್ದರಾಮಯ್ಯಗೆ ಕನ್ನಡ ಪದಗಳ ಅರ್ಥ ಕೇಳಿದ ಕರವೇ

ರಾಜ್ಯದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆ ಮಾಡಿದ್ರೆ ಹೊರ್ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡಿಬಂಡವರು ಹಾಗೂ ಗಡಿನಾಡು ಭಾಗದ ಜನ್ರಿಗೆ ಮತ್ತು ವಿಷೇಶ ವಾಗಿ ಅನ್ಯರಾಜ್ಯದಿಂದ ಮದ್ವೇ ಆಗಿಬಂದ್ವರಿಗೆ ತುಂಬಾ ಕಷ್ಟವಾಗುತ್ತಿದೆ. ಯಾವುದೇ ಪರಿಸ್ಥಿತಿಯಲ್ಲಿ ಕನ್ನಡ ಓದಲು ಬರೆಯಲು ಕಲಿ ಬೇಕು ಅನಿವಾರ್ಯ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

2 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

3 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

3 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

3 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

3 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

3 hours ago