ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ. ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿ: ಸಚಿನ ಕುಮಾರ ನಾಯಕ.!

ಸುರಪುರ:22.ಜನವರಿ.25:- ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪದವಿ ಮತ್ತು ಸ್ನಾತಕೋತ್ತರ  ಪದವಿ, M.Phil ಮತ್ತು ಪಿಎಚ್‍ಡಿ ವ್ಯಾಪಾರೀಕರಣವಾಗುತ್ತಿದೆ. ಕೆಲವ ಜನ ಹೈ ಕಲರ ರ್ಪ್ರಿಂಟ್ ತಂದಿದ್ದಾರೆ  ಹಾಗೂ ಕೆಲವ ಜನ ₹ 4 ರಿಂದ 5 ಲಕ್ಷ ಹಣ ನೀಡಿ ಕೇವಲ 6 ತಿಂಗಳಲ್ಲಿ ಪಿಎಚ್‍ಡಿ ಪಡೆದು ಅತಿಥಿ ಉಪನ್ಯಾಸಕರಾಗಿ ಕೆಲ ಆಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಇದರಿಂದ ನಿಜವಾದ ಅಭ್ಯರ್ಥಿಗಳಿಗೆ ಮೋಸವಾಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸಚಿನ್‍ಕುಮಾರ ನಾಯಕ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಮನವಿಯನ್ನು ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆನಂದಕುಮಾರ ಜೋಷಿ ಅವರಿಗೆ ಮಂಗಳವಾರ ಸಲ್ಲಿಸಿ ಅವರು ಮಾತನಾಡಿದರು.

‘ಪಿಎಚ್‍ಡಿಯ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಬೇಕು. ಅಧಿಸೂಚನೆಯ ದಿನಾಂಕ, ಪ್ರವೇಶಾತಿ ರಶೀದಿ, ಹಾಜರಾತಿಯ ದಿನಗಳ ಪ್ರತಿ, ಸಂಶೋಧನೆಯ ನಕಲು ಪ್ರತಿ, ನೋಂದಣಿ ನಕಲು ಪ್ರತಿ, ಪ್ರಬಂಧ ಪರಿಶೀಲನೆ, ಘಟಿಕೋತ್ಸವದ ಭಾವಚಿತ್ರಗಳು, ಪ್ರತಿ 6 ತಿಂಗಳಿಗೊಮ್ಮೆ ನೀಡುವ ಪ್ರಗತಿಯ ವರದಿ, ಸಂಶೋಧನೆಗೆ ಹಾಜರಾದ ಸಿಸಿಟಿವಿ ಕ್ಯಾಮೆರಾ ಫೂಟೇಜ್ ಇತರ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.

‘ಖೊಟ್ಟಿ ಪಿಎಚ್‍ಡಿ ಪ್ರಮಾಣ ಪತ್ರ ನೀಡುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಬಾರದು. ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇದೇ ಪರಿಸ್ಥಿತಿ ಮುಂದುವರಿದರೆ ಹೋರಾಟ ಮಾಡಲಾಗುವುದು. ಲೋಕಾಯುಕ್ತರಿಗೂ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತರಾದ ಗುರುನಾಥರೆಡ್ಡಿ ಶೀಲವಂತ, ತಪ್ಪಣ್ಣ ಪಾಟೀಲ, ಕಲ್ಯಾಣರಾವ ಕೋಠಿಖಾನಿ ಇತರರು ಉಪಸ್ಥಿತರಿದ್ದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago