====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.06.ಮಾರ್ಚ.25:- ರಾಜ್ಯದಲ್ಲಿ ನಕಲಿ ವೈದ್ಯರು ಮತ್ತು ಕಳಪೆ ವೈದ್ಯಕೀಯ ಸೌಲಭ್ಯಗಳ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ.
ರಾಜ್ಯ ಸರ್ಕಾರ ಕಳಪೆ ಔಷಧಿಗಳನ್ನು ನಿಷೇಧಿಸುವ ಜೊತೆಗೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದು ಕಳಪೆ ಔಷಧಿಗಳನ್ನು ವಾಪಸ್ ಪಡೆದು, ಆ ಫಾರ್ಮಾ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಒತ್ತಾಯಿಸಲಾಗಿದೆ ಸಚಿವ ದಿನೇಶ್ ದುಂಡೆರಾವ.
ಇದರೊಂದಿಗೆ ರಾಜ್ಯದಲ್ಲಿಯೂ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯ (ಕೆಪಿಎಂಇ) ನಿಯಮಗಳ ಉಲ್ಲಂಘನೆ ಮಾಡಿದ ಆಸ್ಪತ್ರೆಗಳು ಸೇರಿ ಒಟ್ಟು 16 ಸಂಸ್ಥೆಗಳಿಗೆ 7.35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. 39 ಪ್ರಕರಣಗಳ ವರದಿ ಸಲ್ಲಿಕೆಯಾಗಿದ್ದು, ಎರಡು ಚಿಕಿತ್ಸಾಲಯಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ.
ಜನರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ನಮ್ಮ ಸರ್ಕಾರ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ತಪ್ಪು ನಡೆಯದಂತೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಕಳಪೆ ಔಷಧಗಳು ರಾಜ್ಯಕ್ಕೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================