ಬೆoಗಳೂರು: 02.ಫೆ.25:- ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ.
ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತಾ ಸಮರ್ಥನಿಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್ ನಾಂದಿ ಹಾಡಿದೆ. ಕರ್ನಾಟಕದ ನಿರೀಕ್ಷೆಗಳೂ ಹುಸಿಯಾಗಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರ
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.