ರಾಜ್ಯದಲ್ಲಿ ಪೌರ ಕಾರ್ಮಿಕರಿಗೆ ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ

ಬೆಂಗಳೂರು.07.ಏಪ್ರಿಲ್.25:- ರಾಜ್ಯದಲ್ಲಿ ಪೌರ ಕಾರ್ಮಿಕರಿಗೆ ಮೇ 1 ಕಾರ್ಮಿಕ ದಿನಾಚರಣೆಯಂದು ದಿನದಂತೆ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಇಂದು ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದು ಹೇಳಿದರು.

ವಾಹನ ಚಾಲಕರಿಗೂ ಕಾಯಂ
ಪೌರ ಕಾರ್ಮಿಕರ ಜತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದು ತಿಳಿಸಿದರು.

ನಗದು ರಹಿತ ಆರೋಗ್ಯ ಕಾರ್ಡ್
ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು
ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ.

ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು. ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದು ತಿಳಿಸಿದರು. ‌

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು.

ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಪಿಎಂ

prajaprabhat

Recent Posts

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ

ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…

17 minutes ago

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…

30 minutes ago

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…

48 minutes ago

SC/ST ಮೇಲಿನ ದಾಖಲಾಗುವ ಪ್ರಕರಣಗಳನ್ನು DCRE ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು…

5 hours ago

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸ ದೆಹಲಿ.13.ಜೂನ್.25:- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2025-26ರ ಹಣಕಾಸು ವರ್ಷದ ನೇಮಕಾತಿಯ ಭಾಗವಾಗಿ 4,500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ.…

6 hours ago

ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರಿಗೆ ಸಹಿ ಸುದ್ಧಿ `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ…

16 hours ago