ಬೆಂಗಳೂರು.14.ಫೆ.25:- ಇಂದು ರಾಜ್ಯದ ಹೊಸ ವಿವಿಧ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಉಪ್ ಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ ಅವರು ತಿಳಿಸಿದರು.
ರಾಜ್ಯದ ರಾಜಧಾನಿ ಬೆಂಗಳೂರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿವಿಗೆ ಕೇವಲ 2 ಕೋಟಿ ಹಣ ಮೀಸಲಿಟ್ಟಿದ್ದರು.
ಯಾವುದೇ ಜಮೀನು ನೀಡಿರಲಿಲ್ಲ. ಮಂಡ್ಯ, ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿವಿಗೆ ಮೊದಲ ಆದ್ಯತೆ ನೀಡಿದ ಪರಿಣಾಮ ಇತರೇ ವಿವಿಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು.ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು.
ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು. ಈ ಬಗ್ಗೆ ನಾವು ಚರ್ಚೆ ಮಾಡಿ, ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ.
ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಲು ಆಗಿಲ್ಲ. ಮಾಹಿತಿ ನೀಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಇಡುತ್ತೇವೆ. ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
ಅಗತ್ಯಬಿದ್ದರೆ ಈ ವಿವಿಗಳನ್ನು ಮುಚ್ಚಿಸುತ್ತೀರಾ ಎದು ಕೇಳಿದಾಗ, ನಿಮ್ಮ ಮಾತಿಗೆ ನಾನು ಕುಣಿಯಲು ಆಗುವುದಿಲ್ಲ. ನಿಮ್ಮ ಪ್ರಯತ್ನದಿಂದ ನನ್ನ ಬಾಯಲ್ಲಿ ಕೆಲವು ವಿಚಾರ ಬರುವುದಿಲ್ಲ.
ಬೇರೆಯವರನ್ನು ನಿಭಾಯಿಸುವಂತೆ ನನ್ನನ್ನು ನಿಭಾಯಿಸಲು ಪ್ರಯತ್ನಿಸಬೇಡಿ. ರಾಜ್ಯ, ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ.
ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ. ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ. ಪ್ರಾದ್ಯಾಪಕರು ಮಂಡ್ಯ, ಚಾಮರಾಜನಗರಕ್ಕೆ ಹೋಗಲು ತಯಾರಿಲ್ಲ. ಅವರು ತಮ್ಮ ಹಿರಿತನ ಹಾಗೂ ಪಿಂಚಣಿ ವ್ಯವಸ್ಥೆ ಗಮನದಲ್ಲಿಟ್ಟಕೊಂಡು ಹಿಂಜರಿಯುತ್ತಿದ್ದಾರೆ.
ಈ ವಿಚಾರವಾಗಿ ಬಂದಿರುವ ಸಲಹೆಗಳನ್ನು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ ಎಂದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…