ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!

ರಾಜ್ಯದ ಶಾಲೆಗಳಲಿ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.

ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದಲ್ಲಿ ಎರಡನೇ ಹಂತದ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಶೇಕಡವಾರು ಫಲಿತಾಂಶ ಹೆಚ್ಚಿಸಿಕೊಳ್ಳಲು ನೋಂದಾಯಿಸಿಕೊAಡ ಮಕ್ಕಳಲ್ಲಿ ಒಟ್ಟಾರೆ 84 ಸಾವಿರ ಮಕ್ಕಳು (ಶೇ.98.25 ರಷ್ಟು) ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ವಿವರಿಸಿದರು.

ರಾಜ್ಯದ ಶಾಲೆಗಳಲ್ಲಿ ಮುಖಚಹರೆ ಆಧಾರಿತ ಹಾಜರಾತಿ ಕಡ್ಡಾಯವಾಗಿ ಮಾಡಲಾಗುತ್ತಿದ್ದು, ಈಗಾಗಲೇ ಈ ಕುರಿತು ಪ್ರಾಯೋಗಿಕ ಹಂತ ನಡೆಸಲಾಗಿದೆ ಎಂದರಲ್ಲದೇ, ಅಜೀಂ ಪ್ರೇಮ್ ಜೀ, ಇನ್ಫೋಸಿಸ್ ಹಾಗೂ ವಿವಿಧ ಸಂಸ್ಥೆಗಳ ಸಿಎಸ್‌ಆರ್ ಅನುದಾನ ಬಳಸಿಕೊಂಡು ಮಕ್ಕಳ ಆರೋಗ್ಯದ ಪೌಷ್ಟಿಕತೆ, ಗುಣಮಟ್ಟ ಶಿಕ್ಷಣಕ್ಕೆ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಹ ಶಾಲೆಗೆ ಕೊಡುಗೆ ನೀಡಬೇಕು ಎಂದರು.

ದೇಶದ ಭವಿಷ್ಯವು ಮಕ್ಕಳ ಶಿಕ್ಷಣದ ಬುನಾದಿಯಲ್ಲಿದೆ. ಹಾಗಾಗಿ ನಮ್ಮ ಸರ್ಕಾರವು ಶಾಲೆಗಳಿಗೆ ಮೂಲಭೂತ ಸೌಕರ್ಯ, ಗುಣಮಟ್ಟ ಶಿಕ್ಷಣದ ಬೋಧನೆಗೆ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಇದಕ್ಕೆ ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.

prajaprabhat

Recent Posts

ಇರಾನ್-ಇಸ್ರೇಲ್ ಸಂಘರ್ಷ 4 ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗಿದ್ದು,

ಇರಾನ್ ಮತ್ತು ಇಸ್ರೇಲ್ ನಡುವಿನ ಉಲ್ಬಣಗೊಳ್ಳುತ್ತಿರುವ ಸಂಘರ್ಷವು ಈಗ ನಾಲ್ಕನೇ ದಿನಕ್ಕೆ ಪ್ರವೇಶಿಸಿದೆ, ನಿರಂತರ ಕ್ಷಿಪಣಿ ವಿನಿಮಯಗಳು ನೂರಾರು ಜೀವಗಳನ್ನು…

2 hours ago

ವಿಶ್ವ ಮರುಭೂಮಿೀಕರಣ ವಿರೋಧಿ ದಿನ ಇಂದು; ಭಾರತವು ಜೋಧ್‌ಪುರದಲ್ಲಿ ಕಾರ್ಯಾಗಾರವನ್ನು ಆಯೋಜಿಸಿದೆ.

ಹೊಸ ದೆಹಲಿ.17.ಜೂನ್.25:- ಮರುಭೂಮಿೀಕರಣ ಮತ್ತು ಬರಗಾಲವನ್ನು ಎದುರಿಸಲು ವಿಶ್ವ ದಿನವನ್ನು ಇಂದು ಜಾಗತಿಕವಾಗಿ ಆಚರಿಸಲಾಗುತ್ತಿದೆ. ಭೂ ಅವನತಿ ತಟಸ್ಥತೆ (LDN)…

2 hours ago

ಭಾರತೀಯ ರೈಲ್ವೆ ಇಲಾಖೆಯಲ್ಲಿ 6374 ಹುದ್ದೆಗಳಿಗೆ ಅರ್ಜಿ ಆಹ್ವಾನ |

ಹೊಸ ದೆಹಲಿ.17.ಜೂನ್.25:- ಭಾರತೀಯ ರೈಲ್ ಎಲಾಖೆಯೆಲ್ಲಿ ವಿವಿಧ ತಂತ್ರಜ್ಞ ಹುದ್ದೆಗೆ ರೈಲ್ವೆ ನೇಮಕಾತಿ ಮಂಡಳಿಗಳು (RRB) ವರ್ಷಕ್ಕೆ 51 ವಿಭಾಗಗಳಲ್ಲಿ…

5 hours ago

ವಿಶ್ವವಿದ್ಯಾಲಯ ವ್ಯವಸ್ಥೆಯಲ್ಲಿ ಅತಿಥಿ ಅಧ್ಯಾಪಕರು: ಸಮಸ್ಯೆಗಳು ಮತ್ತು<br>ಸವಾಲುಗಳು

ಶಿಕ್ಷಕರು ಶೈಕ್ಷಣಿಕ ವ್ಯವಸ್ಥೆಯ ಪ್ರಮುಖ ಭಾಗ. ಶಿಕ್ಷಕರ ಸಹಾಯದಿಂದ, ಶೈಕ್ಷಣಿಕ ವ್ಯವಸ್ಥೆಯು ವಿದ್ಯಾರ್ಥಿಗಳು ತಮ್ಮನ್ನು ತಾವು ಹೆಚ್ಚು ಅರ್ಥಮಾಡಿಕೊಳ್ಳುವಂತೆ ಯಶಸ್ವಿಯಾಗಿ…

7 hours ago

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

15 hours ago

ಉಚಿತ ಮೂರು ತಿಂಗಳ UPSC Coaching ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಆಹ್ವಾನ

2025-26 ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ…

15 hours ago