ಬೆಂಗಳೂರು.26.ಜೂನ್.25:-ಸರಕಾರ ಕಲಾವಿದರ ಮಾಸಾಶನ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ. ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು ಹೆಚ್ಚಿಸಿ 2500 ಮಾಡಲಾಗಿದ್ದು, ಇದಕ್ಕಾಗಿ 32.94 ಕೋಟಿ ಹಣವನ್ನು ಸಂಕಷ್ಟದಲ್ಲಿರುವಂತ ರಾಜ್ಯದ ಕಲಾವಿದರ ಮಾಸಾಶನವನ್ನು ಪರಿಷ್ಕೃತ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ.
ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.
2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.
2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಲ್ಲಿ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಗಳಿಗೆ ಹೆಚ್ಚಿಸಿ, ಮಾಸಾಶನಕ್ಕೆ ಬೇಕಾಗುವ ಒಟ್ಟಾರೆ ಮೊತ್ತವನ್ನು ಲೆಕ್ಕಶೀರ್ಷಿಕೆ: 2205-00-102-1-18-251ರಡಿ ರೂ.40,76,72,000/-ಗಳನ್ನು ಬಿಡುಗಡೆ ಮಾಡಲು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಕೈ ಹೆಚ್ಚಿಸಲು ಸರ್ಕಾರದ ಅನುಮೋದನೆ ನೀಡಿದೆ.
ಮುಂದುವರೆದು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರದ ಮಂಜೂರಾತಿ ನೀಡಿದೆ.
ಷರತ್ತುಗಳು:-
1. ಯಾವ ಉದ್ದೇಶಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸತಕ್ಕದ್ದು.
2, ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
3. ಮಂಜೂರು ಮಾಡಿರುವ ಅನುದಾನ ಸಮರ್ಪಕವಾಗಿ ವೆಚ್ಚವಾಗಿರುವ ಬಗ್ಗೆ ಲೆಕ್ಕಪರಿಶೋಧಕರಿಂದ ದೃಢೀಕರಿಸಿದ ಲೆಕ್ಕಪಟ್ಟಿ ಹಾಗೂ ಹಣಬಳಕೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು.
4. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ-1999 ಹಾಗೂ ನಿಯಮಗಳು-2000 ಅನ್ನು ಕಡ್ಡಾಯವಾಗಿ ಪಾಲಿಸುವುದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಎಫ್. ಡಿ 01 ಟಿ.ಎಫ್.ಪಿ 2025, ದಿನಾಂಕ: 02.04.2025ರಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರದನ್ವಯ ಹೊರಡಿಸಲಾಗಿದೆ.
ಬೆಂಗಳೂರು.26.ಜೂನ್.25:- ರಾಜ್ಯದಲ್ಲಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು…
ಬೆಂಗಳೂರು.26.ಜೂನ್.25:- ರಾಜ್ಯದ ಹಲವು ತಾಲೂಕಾ ಹಾಗೂ ಜಿಲ್ಲೆಗಳಲ್ಲಿ ಭಾರಿ ಮಳೆ ಬರುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಇದಕ್ಕೆ ರಾಜ್ಯಾದ …
ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು…
ಕೊಪ್ಪಳ.25.ಜೂನ್.25: ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಿಗೆ ಕೃಷಿ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ…
ಕೊಪ್ಪಳ.25.ಜೂನ್.25:- ರೈತರು ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ಒತ್ತು ನೀಡುವ ಮೂಲಕ ಕಡಿಮೆ ರಾಸಾಯನಿಕ ಗೊಬ್ಬರಗಳ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ…
ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್ಸೈಟ್…