12/06/2025 9:06 PM

Translate Language

Home » ಲೈವ್ ನ್ಯೂಸ್ » ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ಮತ್ತೆ ಅವಕಾಶ.!

ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ಮತ್ತೆ ಅವಕಾಶ.!

Facebook
X
WhatsApp
Telegram

04.ಜಿ.25.ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಯಶಸ್ವಿನಿ  ನೋಂದಣಿ.ದಿ: 01/01/2024 ರಿಂದ ನೋಂದಣಿ ಆರಂಭಗೊಂಡಿದ್ದು. ಮತ್ತು 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ ಸಹಕಾರ ಇಲಾಖೆವತಿಯಿಂದ ತಿಳಿಸಿಲಾಗಿದೆ.

ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹರೀಶ್, ಯಶಸ್ವಿನಿ ಯೋಜನೆಯ ಕೋ-ಆರ್ಡಿನೇಟರ್ ಮೊ;9739588777 ಗೆ ಸಂಪರ್ಕಿಸಬಹುದಾಗಿದ್ದು, ಫಲಾನುಭವಿಗಳು ಈ ಯೋಜನೆ ಸದುಪಯೋಗ ಪಡಿಸಿಕೊಳ್ಳುಬೇಕೆಂದು ಸಹಕಾರ ಸಂಘಟಗಳ ಉಪನಿಬಂಧಕರಾದ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ತಿಳಿಸಿದ್ದಾರೆ.

ಸಹಕಾರ ಇಲಾಖೆ ಪಿಕೆಪಿಎಸ್ ಶಾಖೆ ಗೆ ಭೇಟಿ ನೀಡಿ ಮತ್ತು ಸಂಪೂರ್ಣ್ ಮಾರ್ಗಸೂಚಿಗಳು ತಿಳಿಸ್ಕೋಳಿ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!