ರಾಜ್ಯದ ನಿವೃತ್ತ ಸರ್ಕಾರಿ ನೌಕರರೇ ಪಿಂಚಣಿ ಬಗ್ಗೆ ಸರ್ಕಾರದಿಂದ ಆದೇಶ

ಬೆಂಗಳೂರು.16.ಜುಲೈ.25:- ರಾಜ್ಯ ಸರ್ಕಾರಿ ನಿವೃತ ನೌಕರರು 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡುವ ವಿಧಾನವನ್ನು ಸರಳೀಕೃತಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1) ರ ಆದೇಶದಲ್ಲಿ, ದಿನಾಂಕ:01.07.1993 ಕ್ಕಿಂತ ಮುಂಚಿತವಾಗಿ ನಿವೃತ್ತರಾದವರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದ ಸರ್ಕಾರಿ ನೌಕರರ : ಪ್ರಕರಣಗಳಲ್ಲಿ 80 ರಿಂದ 85, 85 ರಿಂದ 90 ಮತ್ತು 95 ವರ್ಷ ವಯಸ್ಸು ಮೀರಿದವರಿಗೆ ದಿನಾಂಕ 01.04.2006 ರಿಂದ ಜಾರಿಗೆ ಬರುವಂತೆ ಕ್ರಮವಾಗಿ ಅವರ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಶೇಕಡ 20, ಶೇಕಡ 30 ಮತ್ತು ಶೇಕಡ 50 ರಷ್ಟು ಪಿಂಚಣಿಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

2. ಮೇಲೆ ಓದಲಾದ (2)ರ ಅಧಿಕೃತ ಜ್ಞಾಪನದಲ್ಲಿ, ಪಿಂಚಣಿದಾರ/ಕುಟುಂಬ ಪಿಂಚಣಿದಾರನ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ (ಪಿ.ಪಿ.ಓ.) ದಲ್ಲಿ ಲಭ್ಯವಿಲ್ಲದಿದ್ದಲ್ಲಿ ಪಿಂಚಣಿ ಪಾವತಿ ಪ್ರಾಧೀಕಾರವು ಈ ಬಗ್ಗೆ ಸಂಬಂಧಪಟ್ಟ ಪಿಂಚಣಿದಾರ/ಕುಟುಂಬ ಪಿಂಚಣಿದಾರರಿಗೆ ತಿಳಿಸಿ, ಅವರಿಂದ ಈ ಕೆಳಕಂಡ ಯಾವುದಾದರು’ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿ/ಎಂ.ಎಲ್.ಎ. ರವರಿಂದ ದೃಢೀಕರಿಸಿಕೊಂಡು ಪಡೆಯತಕ್ಕದ್ದು ಎಂದು ತಿಳಿಸಿದ್ದು, ನಂತರ ಸಂಬಂಧಿಸಿದ ದಾಖಲೆಯನ್ನು ಮಹಾಲೇಖಪಾಲರ ಕಛೇರಿಗೆ ಕಳುಹಿಸಿ, ಅವರಿಂದ ಔಪಚಾರಿಕ ಪ್ರಾಧೀಕರಣವನ್ನು ಪಡೆದು, ದಿ:13.10.2010ರ ಆದೇಶದ ಪ್ರಕಾರ ಹೆಚ್ಚುವರಿ ಪಿಂಚಣಿ/ಕುಟುಂಬ ಪಿಂಚಣಿಯನ್ನು ಪಾವತಿಸಲು ಕ್ರಮ ಕೈಗೊಳ್ಳತಕ್ಕದ್ದು ಎಂದು ತಿಳಿಸಲಾಗಿರುತ್ತದೆ:-

1. ಎಸ್.ಎಸ್.ಎಲ್.ಸಿ. ಸರ್ಟಿಫಿಕೇಟ್ (ಹುಟ್ಟಿದ ದಿನಾಂಕ ಒಳಗೊಂಡಂತೆ)

2. ಪ್ಯಾನ್ ಕಾರ್ಡ್

3. ಪಾಸ್ ಪೋರ್ಟ್

4. ಡ್ರೈವಿಂಗ್ ಲೈಸೆನ್ಸ್ (ಹುಟ್ಟಿದ ದಿನಾಂಕ ಒಳಗೊಂಡಿದ್ದರೆ)

5. ಎಲೆಕ್ಷನ್ ಐ.ಡಿ.ಕಾರ್ಡ್

3. ಮೇಲೆ ಓದಲಾದ (3)ರ ಸರ್ಕಾರದ ಆದೇಶದಲ್ಲಿ, 80 ವರ್ಷ ಪೂರೈಸಿದ ಹಾಗೂ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿದ ಸರ್ಕಾರಿ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ದಿನಾಂಕ:01.1.2019ರಿಂದ ಜಾರಿಗೆ ಬರುವಂತೆ ಹೆಚ್ಚುವರಿ ನಿವೃತ್ತಿ ವೇತನ /ಕುಟುಂಬ ನಿವೃತ್ತಿ ವೇತನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ ಹಾಗೂ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು 80 ವರ್ಷ ಪೂರೈಸಿದ ಅಥವಾ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿದಾಗ ಹೆಚ್ಚುವರಿ ಪಿಂಚಣಿ ಮೊತ್ತವನ್ನು ಸದರಿ ಆದೇಶದಲ್ಲಿ ಸೂಚಿಸಿರುವ ದರದಂತೆ ಪಾವತಿಸಲು ಆದೇಶಿಸಲಾಗಿರುತ್ತದೆ.

4. ಪ್ರಸ್ತುತ ಕುಟುಂಬ ಪಿಂಚಣಿದಾರರ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ (ಪಿ.ಪಿ.ಓ.) ದಲ್ಲಿ ಲಭ್ಯವಿಲ್ಲದಿರುವ ಸಂದರ್ಭದಲ್ಲಿ, ಕುಟುಂಬ ಪಿಂಚಣಿದಾರರರಿಗೆ ಹೆಚ್ಚುವರಿ ಪಿಂಚಣಿ ಮಂಜೂರು ಮಾಡಲು ಇರುವ ವಿಧಾನವನ್ನು ಸರಳೀಕರಣಗೊಳಿಸುವ ಕುರಿತು ಸ್ವೀಕೃತವಾಗುತ್ತಿರುವ ಮನವಿಗಳನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

80 ವರ್ಷ ಪೂರೈಸಿರುವ ಹಾಗೂ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡಲು ಪಿಂಚಣಿ ಪಾವತಿ ಆದೇಶ (ಪಿಪಿಒ) ದಲ್ಲಿ ಜನ್ಮ ದಿನಾಂಕವು ಲಭ್ಯವಿಲ್ಲದಿದ್ದಲ್ಲಿ ಈ ಕೆಳಕಂಡಂತೆ ಕ್ರಮಕೈಗೊಳ್ಳಲು ಆದೇಶಿಸಿದೆ:

1. ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್/262/2024, ದಿನಾಂಕ:28.08.2024 ರ ಕಂಡಿಕೆ 11.1 ರಲ್ಲಿ ಸೂಚಿಸಿರುವಂತೆ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಜೊತೆಯಾಗಿ ಲಭ್ಯವಿರುವ ಪಿಂಚಣಿದಾರರ ಪ್ರಕರಣಗಳಲ್ಲಿ ಸಂದರ್ಭಾನುಸಾರ ದಿನಾಂಕ:11.01.2019ರ ಆದೇಶದನ್ವಯ ಲಭ್ಯವಿರುವ ಹೆಚ್ಚುವರಿ ಪಿಂಚಣಿಯ ಸೌಲಭ್ಯವು ಜೀವಂತ ಸದಸ್ಯನ ಪರಿಷ್ಕೃತ ನಿವೃತ್ತಿ ವೇತನಕ್ಕೆ ಮಾತ್ರ ಸೀಮಿತಗೊಳಿಸತಕ್ಕದ್ದು.

2. ಕುಟುಂಬ ಪಿಂಚಣಿಯನ್ನು ಮಾತ್ರ ಪಡೆಯುತ್ತಿರುವ ಕುಟುಂಬ ಪಿಂಚಣಿದಾರರ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ(ಪಿ.ಪಿ.ಓ.)ದಲ್ಲಿ ಲಭ್ಯವಿಲ್ಲದಿದ್ದಲ್ಲಿ, ಅವರು ಕುಟುಂಬ ಪಿಂಚಣಿ ಪಡೆಯುತ್ತಿರುವ ಸಾರ್ವಜನಿಕ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕುಗಳು ನಿರ್ವಹಿಸಿರುವ KYC ಯಲ್ಲಿ, ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಆಇ(ವಿ) 27 ಪಿಇಎನ್ 2007. ದಿನಾಂಕ:06.01.2011 ರಲ್ಲಿ ಸೂಚಿಸಿರುವ ದಾಖಲೆಗಳು ಲಭ್ಯವಿದ್ದಲ್ಲಿ, ಸದರಿ ದಾಖಲೆಗಳಲ್ಲಿ ಲಭ್ಯವಿರುವ ಜನ್ಮ ದಿನಾಂಕವನ್ನು ಪರಿಗಣಿಸಿ, ಸದರಿ ಮಾಹಿತಿಯನ್ನು ಖಜಾನೆಗಳಿಗೆ ನೀಡಲು ಬ್ಯಾಂಕುಗಳು ಕ್ರಮ ಕೈಗೊಳ್ಳುವುದು. ಖಜಾನೆಗಳು, ಖಜಾನೆ-2ರ ಪಿಂಚಣಿ ಡೇಟಾಬೇಸ್‌ನಲ್ಲಿ ಹಾಗೂ ಖಜಾನೆಗಳ ಕೆ.ಟಿ.ಸಿ. ವಹಿ-45 ರಲ್ಲಿ ವಿವರಗಳನ್ನು ದಾಖಲಿಸಿ ಮತ್ತು ದೃಢೀಕರಿಸಿ, ಮಾಹಿತಿಯನ್ನು ಮಹಾಲೇಖಪಾಲರಿಗೆ ನೀಡುವುದು.

3. ಮೇಲ್ಕಂಡ (2)ರ ಅವಕಾಶ ಅನ್ವಯವಾಗದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಖಜಾನೆಗಳು ದಿನಾಂಕ:06.01.2011ರ ಸರ್ಕಾರದ ಅಧಿಕೃತ ಜ್ಞಾಪನದಲ್ಲಿ ಸೂಚಿಸಿರುವ ವಿಧಾನವನ್ನು ಅನುಸರಿಸುವಂತೆ ತಿಳಿಸಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago