ಕಲಬುರಗಿ.31.ಮೇ.25:- ಕಲ್ಯಾಣ ಕರ್ನಾಟಕದ ಭಾಗದ ನ್ಯಾಯಾಲಯಗಳಲ್ಲಿ ಸಿಬ್ಬಂದಿ ಕೊರತೆ ಎದುರಿಸುತ್ತಿವೆ. ನ್ಯಾಯಾಲಯದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂದಿ ನ್ಯಾಯಾಂಗ, ವಕೀಲರು ಹಾಗೂ ಕಕ್ಷಿದಾರರ ನಡುವೆ ಸಂಪರ್ಕ ಸೇತುವೆಯಾಗಿರುತ್ತಾರೆ. ಆದ ಕಾರಣ ಸಿಬ್ಬಂದಿ ಕೊರತೆ ಪ್ರಕರಣಗಳ ವಿಲೇವಾರಿ ಮೇಲೆ ಪರಿಣಾಮ ಬೀರುತ್ತಿದೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ನ್ಯಾಯಾಲಯಗಳಿಗೆ ಒಟ್ಟು 2,893 ವಿವಿಧ ಹಂತದ ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಆ ಪೈಕಿ 566 ಹುದ್ದೆಗಳು ಖಾಲಿ ಇವೆ.
ಬೀದರ್ ಜಿಲ್ಲೆಗೆ ಒಟ್ಟು 481 ಹುದ್ದೆಗಳು ಮಂಜೂರಾಗಿದ್ದು, ಅವುಗಳಲ್ಲಿ 156 ಹುದ್ದೆಗಳು ಖಾಲಿ ಇವೆ. ಬಳ್ಳಾರಿ-ವಿಜಯನಗರಕ್ಕೆ ಮಂಜೂರಾದ 679 ಹುದ್ದೆಗಳಲ್ಲಿ 133 ಹುದ್ದೆಗಳು ಖಾಲಿ ಇವೆ. ಕಲಬುರಗಿ ಜಿಲ್ಲೆಗೆ ಮಂಜೂರಾದ 722 ಹುದ್ದೆಗಳಲ್ಲಿ 91 ಹುದ್ದೆ ಖಾಲಿ ಇವೆ. ಕೊಪ್ಪಳದಲ್ಲಿ 331 ಹುದ್ದೆಗಳ ಪೈಕಿ 63, ರಾಯಚೂರು 434 ಹುದ್ದೆಗಳಲ್ಲಿ 80 ಹುದ್ದೆ ಮತ್ತು ಯಾದಗಿರಿಯಲ್ಲಿ 246 ಹುದ್ದೆಗಳ ಪೈಕಿ 43 ಹುದ್ದೆಗಳು ಖಾಲಿ ಇವೆ.
ಸಿಬ್ಬಂದಿಯ ಪಾತ್ರ ಏನು?: ನ್ಯಾಯಾಲಯಗಳಲ್ಲಿರುವ ಸಿಬ್ಬಂದಿ ಪ್ರಕರಣ ಪರಿಶೀಲನೆ, ಕಡತ ನಿರ್ವಹಣೆ ಹಾಗೂ ನೋಟಿಸ್ ಸಿದ್ಧಪಡಿಸುವುದು, ಅದನ್ನು ರವಾನಿಸುವುದು ಹಾಗೂ ಇತರ ಕೆಲಸಗಳನ್ನು ಮಾಡುತ್ತಾರೆ.
ನೇಮಕಾತಿ ಪ್ರಕ್ರಿಯೆ ಹೇಗೆ?: ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹಾಗೂ ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುತ್ತದೆ. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ನೇತೃತ್ವದ ನೇಮಕಾತಿ ಪ್ರಾಧಿಕಾರವು ಉಳಿದ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಕೆಲವು ಹುದ್ದೆಗಳನ್ನು ಮುಂಬಡ್ತಿ ಮೂಲಕ ಭರ್ತಿ ಮಾಡಲಾಗುತ್ತದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…