ರಾಜ್ಯದ ವಿಶೇಷ ಚೇತನರಿಗೆ ದರ್ಶನಿ ಯೋಜನೆ’ಗೆ ಚಾಲನೆ.!

ಬೆಂಗಳೂರು.06.ಫೆ.25:- ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿಯಾಗಿಸಲು ಸಹಾಯಕ ಸಾಧನಗಳ ಪೂರೈಕೆ – ದರ್ಶಿನಿ ಕಾರ್ಯಕ್ರಮಕ್ಕೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ರವರು ಯೂಟ್ಯೂಬ್ ಮುಖಾಂತರ ಚಾಲನೆ ನೀಡಿದರು.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಅರಿವು ಕೇಂದ್ರಗಳನ್ನು ವಿಶೇಷಚೇತನರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಶೇಷಚೇತನರ ಸಹಾಯಕ ಸಾಧನಗಳನ್ನು ಪೂರೈಸುವ ‘ದರ್ಶಿನಿ ಯೋಜನೆ’ಗೆ ಇಂದು ಚಾಲನೆ ನೀಡಿದೆ.

ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೇಗೇರಿಸಲಾಗಿದೆ. ಅರಿವು ಕೇಂದ್ರಗಳು ಇದೀಗ ಸಮುದಾಯದ ಜ್ಞಾನಾರ್ಜನೆಯ ಕೇಂದ್ರಗಳಾಗಿವೆ.

ಎಲ್ಲರನ್ನೂ ಒಳಗೊಳ್ಳುವ ದಿಸೆಯಲ್ಲಿ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿಯಾಗಿಸಲು ಪ್ರಥಮ ಹಂತದಲ್ಲಿ 8 ಸಹಾಯಕ ಸಾಧನಗಳನ್ನು ನೀಡಲಾಗುತ್ತಿದೆ. ಹಂತ ಹಂತವಾಗಿ ಅವಶ್ಯಕತೆ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಹೆಚ್ಚಿನ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅರಿವು ಕೇಂದ್ರಗಳನ್ನು ಸದೃಢಗೊಳಿಸಲಾಗುವುದು ಎಂದರು.

ಈಗಾಗಲೇ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ವಿಶೇಷ ಚೇತನ ವ್ಯಕ್ತಿಗಳು ಅರಿವು ಕೇಂದ್ರಗಳನ್ನು ಸುಲಭವಾಗಿ ಬಳಸಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ವಿಶೇಷವಾಗಿ, ದೃಷ್ಟಿಹೀನತೆ ಹೊಂದಿರುವ ವ್ಯಕ್ತಿಗಳಿಗೆ ಬೈಲ್ ಸಾಹಿತ್ಯ ಮತ್ತು ಇತರ ಸಹಾಯಕ ತಂತ್ರಜ್ಞಾನಗಳು ಲಭಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಮತ್ತು ಯುಪಿಎಸ್ ಖರೀದಿಸಲು ಅನುದಾನ ಬಿಡುಗಡೆ ಮಾಡಲಾಗಿದೆ.

ವಿಷಯ ಪರಿಣಿತರೊಂದಿಗೆ ಸಮಾಲೋಚಿಸಿ ಕೆಳಕಂಡ 8 ಸಹಾಯಕ ಉಪಕರಣಗಳನ್ನು NIEPVD (National Institute for Empowerment of Persons with Visual Disabilities) ಮೂಲಕ ಖರೀದಿಸಿ, ವಿತರಿಸಲು ಕ್ರಮವಹಿಸಲಾಗಿದೆ.

1. NIVH ಇಂಟರ್‌ಪಾಯಿಂಟ್ ಬ್ರೈಲ್ ಸ್ಲೇಟ್ ಮತ್ತು ಸ್ಟೈಲಸ್
2. ಕಾನ್‌ಕ್ಲೇವ್ ಹೆಡ್ ಪ್ಲಾಸ್ಟಿಕ್ ಸ್ಟೈಲಸ್
3. ಟ್ಯಾಕ್ಟೈಲ್ ಚೆಸ್ ಬೋರ್ಡ್ (ಇನ್‌ಕ್ಲೂಸಿವ್ ಡಿಸೈನ್)
4. ಆಡಿಯೋ ಬಾಲ್
5. ಪಜಲ್
6. ಹಾವು ಮತ್ತು ಏಣಿ
7. ಡೈಸ್ ಜೊತೆ ಪ್ಲೇಟ್
8. ಅಬಾಕಸ್

ಹೀಗೆ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿ ಮತ್ತು ಎಲ್ಲರನ್ನೂ ಒಳಗೊಳ್ಳುವ ಜ್ಞಾನ ಕೇಂದ್ರಗಳನ್ನಾಗಿಸಲು ಪ್ರಯತ್ನಿಸಲಾಗಿದೆ.

ಗ್ರಾಮೀಣ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಗಳಿಗೆ ಸಜ್ಜಾಗಲು ಮತ್ತು ಮಕ್ಕಳಲ್ಲಿ ಪರಿಸರ ಸಂವೇದನಾಶೀಲತೆಗೆ ಪ್ರೋತ್ಸಾಹ, ಕಲಿಕೆಗೆ ಉತ್ತೇಜನ ನೀಡುವುದರ ಮೂಲಕ ‘ಅರಿವು ಕೇಂದ್ರಗಳ ಜ್ಞಾನ ಸಂಪನ್ಮೂಲವನ್ನು ಬಳಸಿಕೊಂಡು, ಯಶಸ್ಸಿನತ್ತ ಹೆಜ್ಜೆಯಿಡುತ್ತಿದ್ದಾರೆ.

ಈ ಯೋಜನೆಯು ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಮತ್ತು ಸಮುದಾಯ ಅಭಿವೃದ್ಧಿಯೆಡೆಗೆ ಇರುವ ಬದ್ಧತೆಯನ್ನು ಎತ್ತಿಹಿಡಿಯುತ್ತದೆ ಎಂದರು.

Source: kannada news kwno

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago